ಮೂಡುಬಿದಿರೆ: ಪೆನಾಲ್ಟಿ ಶೂಟೌಟ್ನಲ್ಲಿ ಅಮೋಘ ಆಟ ಪ್ರದರ್ಶಿಸಿದ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈಸೂರು ವಲಯ ಅಂತರ ಕಾಲೇಜು ಪುರುಷರ ವಿಭಾಗದ ಫುಟ್ಬಾಲ್ ಚಾಂಪಿಯನ್ಶಿಪ್ ಮುಡಿಗೇರಿಸಿಕೊಂಡಿತು.
ಇಲ್ಲಿನ ಆಳ್ವಾಸ್ ಕಾಲೇಜಿನ ಅರಮನೆ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ಮತ್ತು ಕಣಚೂರು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ೦-೦ ಗೋಲುಗಳಿಂದ ಸಮಬಲ ಸಾಧಿಸಿತು. ಚಾಂಪಿಯನ್ಶಿಪ್ ನಿರ್ಧರಿಸುವ ನಿರ್ಣಾಯಕ ಪೆನಾಲ್ಟಿ ಶೂಟೌಟ್ನಲ್ಲಿ ಆಳ್ವಾಸ್ನ ಆಟಗಾರರು ಹೊಡೆದ ಎಲ್ಲ 5 ಕಿಕ್ಗಳು ಗೋಲನ್ನು ಮುತ್ತಿಕ್ಕಿದ್ದರೆ, ಕಣಚೂರು ತಂಡದ ಗೋಲು ಹೊಡೆಯುವ ಪ್ರಯತ್ನವನ್ನು ಆಳ್ವಾಸ್ ಗೋಲ್ಕೀಪರ್ ರುಮನ್ ಎರಡು ಬಾರಿ ವಿಫಲಗೊಳಿಸಿದರು. ಅಂತಿಮವಾಗಿ ಆಳ್ವಾಸ್ ತಂಡವು 5-3ಗೋಲುಗಳಿಂದ ಕಣಚೂರು ತಂಡವನ್ನು ಮಣಿಸಿ, ಪ್ರಶಸ್ತಿ ಜಯಿಸಿತು. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ತಂಡವು 2-1 ಗೋಲುಗಳಿಂದ ಎಸ್ಸಿಎಸ್ ನರ್ಸಿಂಗ್ ಕಾಲೇಜು ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು. ಇನ್ನೊಂದು ಸೆಮಿಫೈನಲ್ನಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ತಂಡವನ್ನು 2-0 ಗೋಲುಗಳಿಂದ ಮಣಿಸಿದ ಕಣಚೂರು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಫೈನಲ್ಗೆ ಪ್ರವೇಶ ಪಡೆದಿತ್ತು. ಒಟ್ಟು 72 ತಂಡಗಳು ಸ್ಪರ್ಧಿಸಿದ್ದು, 1,150 ಆಟಗಾರರು ಟೂರ್ನಿಯಲ್ಲಿ ಪಾಲ್ಗೊಂಡರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…