ಜನ ಮನದ ನಾಡಿ ಮಿಡಿತ

Advertisement

ಮೂಡಬಿದಿರೆ: ಆಳ್ವಾಸ್ ಕಾಲೇಜು ಎನ್‌ಎಸ್‌ಎಸ್ ಘಟಕ ಉದ್ಘಾಟನೆ

ಮೂಡಬಿದಿರೆ: ಮಕ್ಕಳೆಂದರೆ ಪ್ರಶ್ನೆ, ಆಸಕ್ತಿ, ಕ್ರಿಯಾಶೀಲತೆ, ಚಟುವಟಿಕೆಯ ದ್ಯೋತಕ. ಆದುದರಿಂದ ವಿದ್ಯಾರ್ಥಿಗಳು ಯಾವಾಗಲೂ ಮಗುವಿನ ಮನಸ್ಥಿತಿಯನ್ನು ಉಳಿಸಿಕೊಳ್ಳಬೇಕು. ರಾಷ್ಟ್ರೀಯ ಸ್ವಯಂ ಸೇವಾ ವಿದ್ಯಾರ್ಥಿ ಮಾಡುವ ಎಲ್ಲಾ ಚಟುವಟಿಕೆಗಳು ರಾಷ್ಟ್ರೀಯತೆಯಿಂದ ಕೂಡಿರಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.

ಇವರು ಆಳ್ವಾಸ್ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ 2023-24ರ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಸೇವೆಯು ಶಾಶ್ವತವಾಗಿ ಸಂತೋಷ ನೀಡುತ್ತದೆ. ಆದುದರಿಂದ ವಿದ್ಯಾರ್ಥಿಗಳು ಕ್ಷಣಿಕ ಸಂತೋಷಕ್ಕೆ ಯತ್ನಿಸದೇ ಸೇವೆಯ ಮೂಲಕ ಶಾಶ್ವತ ಸಂತೋಷಕ್ಕೆ ಪ್ರಯತ್ನಿಸಬೇಕೆಂದು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಎನ್‌ಎಸ್‌ಎಸ್ ಸಂಯೋಜನಾಧಿಕಾರಿಗಳಾದ ವಸಂತ್, ಅಕ್ಷತಾ ಪ್ರಭು, ಶ್ರೇಯಸ್ವಿ, ಅಪರ್ಣ ಹಾಗೂ ವಿದ್ಯಾರ್ಥಿ ಕಾರ್ಯದರ್ಶಿ ಆದಿತ್ಯ ನಾಯಕ್ ಸಹ ಕರ‍್ಯದರ್ಶಿ ಸಮೀಕ್ಷಾ, ಯುನಿಟ್ ಲೀಡರ್‌ಗಳಾದ ಆದಿಶ್, ದಿಶಾ, ಸೂರಜ್, ವರ್ಷಿತಾ, ಅನನ್ಯಾ, ಸೃಜನ್, ಸನ್ವಿತ್ ಉಪಸ್ಥಿತರಿದ್ದರು. ಶಶಾಂಕ್ ಪರಿಚಯ ಭಾಷಣ ಮಾಡಿದರು. ಸ್ವೀಕೃತ್ ಸ್ವಾಗತಿಸಿ, ಧೀರಜ್ ವಂದಿಸಿ, ಆದರ್ಶ್ ಕಾರ್ಯಕ್ರಮ ನಿರೂಪಿಸಿದರು. ಸನ್ವಿತ್ ಅತಿಥಿಗಳನ್ನು ಪರಿಚಯಿಸಿದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!