ಜನ ಮನದ ನಾಡಿ ಮಿಡಿತ

Advertisement

ಮೂಡಬಿದಿರೆ: ಆಳ್ವಾಸ್ ಕಾಲೇಜು ಎನ್‌ಎಸ್‌ಎಸ್ ಘಟಕ ಉದ್ಘಾಟನೆ

ಮೂಡಬಿದಿರೆ: ಮಕ್ಕಳೆಂದರೆ ಪ್ರಶ್ನೆ, ಆಸಕ್ತಿ, ಕ್ರಿಯಾಶೀಲತೆ, ಚಟುವಟಿಕೆಯ ದ್ಯೋತಕ. ಆದುದರಿಂದ ವಿದ್ಯಾರ್ಥಿಗಳು ಯಾವಾಗಲೂ ಮಗುವಿನ ಮನಸ್ಥಿತಿಯನ್ನು ಉಳಿಸಿಕೊಳ್ಳಬೇಕು. ರಾಷ್ಟ್ರೀಯ ಸ್ವಯಂ ಸೇವಾ ವಿದ್ಯಾರ್ಥಿ ಮಾಡುವ ಎಲ್ಲಾ ಚಟುವಟಿಕೆಗಳು ರಾಷ್ಟ್ರೀಯತೆಯಿಂದ ಕೂಡಿರಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.

ಇವರು ಆಳ್ವಾಸ್ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ 2023-24ರ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಸೇವೆಯು ಶಾಶ್ವತವಾಗಿ ಸಂತೋಷ ನೀಡುತ್ತದೆ. ಆದುದರಿಂದ ವಿದ್ಯಾರ್ಥಿಗಳು ಕ್ಷಣಿಕ ಸಂತೋಷಕ್ಕೆ ಯತ್ನಿಸದೇ ಸೇವೆಯ ಮೂಲಕ ಶಾಶ್ವತ ಸಂತೋಷಕ್ಕೆ ಪ್ರಯತ್ನಿಸಬೇಕೆಂದು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಎನ್‌ಎಸ್‌ಎಸ್ ಸಂಯೋಜನಾಧಿಕಾರಿಗಳಾದ ವಸಂತ್, ಅಕ್ಷತಾ ಪ್ರಭು, ಶ್ರೇಯಸ್ವಿ, ಅಪರ್ಣ ಹಾಗೂ ವಿದ್ಯಾರ್ಥಿ ಕಾರ್ಯದರ್ಶಿ ಆದಿತ್ಯ ನಾಯಕ್ ಸಹ ಕರ‍್ಯದರ್ಶಿ ಸಮೀಕ್ಷಾ, ಯುನಿಟ್ ಲೀಡರ್‌ಗಳಾದ ಆದಿಶ್, ದಿಶಾ, ಸೂರಜ್, ವರ್ಷಿತಾ, ಅನನ್ಯಾ, ಸೃಜನ್, ಸನ್ವಿತ್ ಉಪಸ್ಥಿತರಿದ್ದರು. ಶಶಾಂಕ್ ಪರಿಚಯ ಭಾಷಣ ಮಾಡಿದರು. ಸ್ವೀಕೃತ್ ಸ್ವಾಗತಿಸಿ, ಧೀರಜ್ ವಂದಿಸಿ, ಆದರ್ಶ್ ಕಾರ್ಯಕ್ರಮ ನಿರೂಪಿಸಿದರು. ಸನ್ವಿತ್ ಅತಿಥಿಗಳನ್ನು ಪರಿಚಯಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!