ಮೂಡಬಿದಿರೆ: ಮಕ್ಕಳೆಂದರೆ ಪ್ರಶ್ನೆ, ಆಸಕ್ತಿ, ಕ್ರಿಯಾಶೀಲತೆ, ಚಟುವಟಿಕೆಯ ದ್ಯೋತಕ. ಆದುದರಿಂದ ವಿದ್ಯಾರ್ಥಿಗಳು ಯಾವಾಗಲೂ ಮಗುವಿನ ಮನಸ್ಥಿತಿಯನ್ನು ಉಳಿಸಿಕೊಳ್ಳಬೇಕು. ರಾಷ್ಟ್ರೀಯ ಸ್ವಯಂ ಸೇವಾ ವಿದ್ಯಾರ್ಥಿ ಮಾಡುವ ಎಲ್ಲಾ ಚಟುವಟಿಕೆಗಳು ರಾಷ್ಟ್ರೀಯತೆಯಿಂದ ಕೂಡಿರಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಇವರು ಆಳ್ವಾಸ್ ಕಾಲೇಜಿನ ಎನ್ಎಸ್ಎಸ್ ಘಟಕಗಳ 2023-24ರ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಸೇವೆಯು ಶಾಶ್ವತವಾಗಿ ಸಂತೋಷ ನೀಡುತ್ತದೆ. ಆದುದರಿಂದ ವಿದ್ಯಾರ್ಥಿಗಳು ಕ್ಷಣಿಕ ಸಂತೋಷಕ್ಕೆ ಯತ್ನಿಸದೇ ಸೇವೆಯ ಮೂಲಕ ಶಾಶ್ವತ ಸಂತೋಷಕ್ಕೆ ಪ್ರಯತ್ನಿಸಬೇಕೆಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಎನ್ಎಸ್ಎಸ್ ಸಂಯೋಜನಾಧಿಕಾರಿಗಳಾದ ವಸಂತ್, ಅಕ್ಷತಾ ಪ್ರಭು, ಶ್ರೇಯಸ್ವಿ, ಅಪರ್ಣ ಹಾಗೂ ವಿದ್ಯಾರ್ಥಿ ಕಾರ್ಯದರ್ಶಿ ಆದಿತ್ಯ ನಾಯಕ್ ಸಹ ಕರ್ಯದರ್ಶಿ ಸಮೀಕ್ಷಾ, ಯುನಿಟ್ ಲೀಡರ್ಗಳಾದ ಆದಿಶ್, ದಿಶಾ, ಸೂರಜ್, ವರ್ಷಿತಾ, ಅನನ್ಯಾ, ಸೃಜನ್, ಸನ್ವಿತ್ ಉಪಸ್ಥಿತರಿದ್ದರು. ಶಶಾಂಕ್ ಪರಿಚಯ ಭಾಷಣ ಮಾಡಿದರು. ಸ್ವೀಕೃತ್ ಸ್ವಾಗತಿಸಿ, ಧೀರಜ್ ವಂದಿಸಿ, ಆದರ್ಶ್ ಕಾರ್ಯಕ್ರಮ ನಿರೂಪಿಸಿದರು. ಸನ್ವಿತ್ ಅತಿಥಿಗಳನ್ನು ಪರಿಚಯಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…