ಮೂಡಬಿದಿರೆ: ಮಕ್ಕಳೆಂದರೆ ಪ್ರಶ್ನೆ, ಆಸಕ್ತಿ, ಕ್ರಿಯಾಶೀಲತೆ, ಚಟುವಟಿಕೆಯ ದ್ಯೋತಕ. ಆದುದರಿಂದ ವಿದ್ಯಾರ್ಥಿಗಳು ಯಾವಾಗಲೂ ಮಗುವಿನ ಮನಸ್ಥಿತಿಯನ್ನು ಉಳಿಸಿಕೊಳ್ಳಬೇಕು. ರಾಷ್ಟ್ರೀಯ ಸ್ವಯಂ ಸೇವಾ ವಿದ್ಯಾರ್ಥಿ ಮಾಡುವ ಎಲ್ಲಾ ಚಟುವಟಿಕೆಗಳು ರಾಷ್ಟ್ರೀಯತೆಯಿಂದ ಕೂಡಿರಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಇವರು ಆಳ್ವಾಸ್ ಕಾಲೇಜಿನ ಎನ್ಎಸ್ಎಸ್ ಘಟಕಗಳ 2023-24ರ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಸೇವೆಯು ಶಾಶ್ವತವಾಗಿ ಸಂತೋಷ ನೀಡುತ್ತದೆ. ಆದುದರಿಂದ ವಿದ್ಯಾರ್ಥಿಗಳು ಕ್ಷಣಿಕ ಸಂತೋಷಕ್ಕೆ ಯತ್ನಿಸದೇ ಸೇವೆಯ ಮೂಲಕ ಶಾಶ್ವತ ಸಂತೋಷಕ್ಕೆ ಪ್ರಯತ್ನಿಸಬೇಕೆಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಎನ್ಎಸ್ಎಸ್ ಸಂಯೋಜನಾಧಿಕಾರಿಗಳಾದ ವಸಂತ್, ಅಕ್ಷತಾ ಪ್ರಭು, ಶ್ರೇಯಸ್ವಿ, ಅಪರ್ಣ ಹಾಗೂ ವಿದ್ಯಾರ್ಥಿ ಕಾರ್ಯದರ್ಶಿ ಆದಿತ್ಯ ನಾಯಕ್ ಸಹ ಕರ್ಯದರ್ಶಿ ಸಮೀಕ್ಷಾ, ಯುನಿಟ್ ಲೀಡರ್ಗಳಾದ ಆದಿಶ್, ದಿಶಾ, ಸೂರಜ್, ವರ್ಷಿತಾ, ಅನನ್ಯಾ, ಸೃಜನ್, ಸನ್ವಿತ್ ಉಪಸ್ಥಿತರಿದ್ದರು. ಶಶಾಂಕ್ ಪರಿಚಯ ಭಾಷಣ ಮಾಡಿದರು. ಸ್ವೀಕೃತ್ ಸ್ವಾಗತಿಸಿ, ಧೀರಜ್ ವಂದಿಸಿ, ಆದರ್ಶ್ ಕಾರ್ಯಕ್ರಮ ನಿರೂಪಿಸಿದರು. ಸನ್ವಿತ್ ಅತಿಥಿಗಳನ್ನು ಪರಿಚಯಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…