ಮಂಗಳೂರು: ಕರ್ನಾಟಕ-ಕೇರಳ ಗಡಿ ಜಿಲ್ಲೆಯಾದ ಕಾಸರಗೋಡಿನ ಬದಿಯಡ್ಕ ಸಮೀಪ ಪಳ್ಳತ್ತಡ್ಕ ಎಂಬಲ್ಲಿ ಶಾಲಾ ಬಸ್-ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ.
ಶಾಲಾ ಮಕ್ಕಳನ್ನು ಬಿಟ್ಟು ಬರುತ್ತಿದ್ದ ಬಸ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದೆ. ಘಟನೆಯ ತೀವ್ರತೆಗೆ ಆಟೋ ನಜ್ಜುಗುಜ್ಜಾಗಿದ್ದು, ಆಟೋದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.
ಪೆರ್ಲೆ ಭಾಗದಿಂದ ಚಲಿಸುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಹಾಗೂ ಮೊಗ್ರಲ್ ಪುತ್ತೂರು ಮೂಲದ ಆಟೋ ನಡುವೆ ಅಪಘಾತ ನಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ.
ತಾಯಲಂಗಡಿ ನಿವಾಸಿ ಪ್ರಸ್ತುತ ಮೊಗ್ರಾಲಿನಲ್ಲಿ ವಾಸಿಸುವ ರಿಕ್ಷಾ ಡ್ರೈವರ್ ಅಬ್ದುಲ್ ರೌಪ್ (58), ಮೊಗ್ರಾಲಿನ ಉಸ್ಮಾನ್ ಎಂಬವರ ಪತ್ನಿ ಭಿಪಾತಿಮ್ಮ (50), ಷೇಕ್ ಅಲಿ ಎಂಬವರ ಪತ್ನಿ ಭಿಪಾತಿಮ್ಮ (60), ಇಸ್ಮಾಯಿಲ್ ಅವರ ಪತ್ನಿ ಉಮ್ಮು ಅಲಿಮಾ,ಬೆಳ್ಳೂರು ಅಬ್ಬಾಸ್ ಎಂಬವರ ಪತ್ನಿ ನಫೀಸ ಸಾವನ್ನಪ್ಪಿದವರು.
ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…