ಮಂಗಳೂರು: ಕರ್ನಾಟಕ-ಕೇರಳ ಗಡಿ ಜಿಲ್ಲೆಯಾದ ಕಾಸರಗೋಡಿನ ಬದಿಯಡ್ಕ ಸಮೀಪ ಪಳ್ಳತ್ತಡ್ಕ ಎಂಬಲ್ಲಿ ಶಾಲಾ ಬಸ್-ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ.
ಶಾಲಾ ಮಕ್ಕಳನ್ನು ಬಿಟ್ಟು ಬರುತ್ತಿದ್ದ ಬಸ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದೆ. ಘಟನೆಯ ತೀವ್ರತೆಗೆ ಆಟೋ ನಜ್ಜುಗುಜ್ಜಾಗಿದ್ದು, ಆಟೋದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.
ಪೆರ್ಲೆ ಭಾಗದಿಂದ ಚಲಿಸುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಹಾಗೂ ಮೊಗ್ರಲ್ ಪುತ್ತೂರು ಮೂಲದ ಆಟೋ ನಡುವೆ ಅಪಘಾತ ನಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ.
ತಾಯಲಂಗಡಿ ನಿವಾಸಿ ಪ್ರಸ್ತುತ ಮೊಗ್ರಾಲಿನಲ್ಲಿ ವಾಸಿಸುವ ರಿಕ್ಷಾ ಡ್ರೈವರ್ ಅಬ್ದುಲ್ ರೌಪ್ (58), ಮೊಗ್ರಾಲಿನ ಉಸ್ಮಾನ್ ಎಂಬವರ ಪತ್ನಿ ಭಿಪಾತಿಮ್ಮ (50), ಷೇಕ್ ಅಲಿ ಎಂಬವರ ಪತ್ನಿ ಭಿಪಾತಿಮ್ಮ (60), ಇಸ್ಮಾಯಿಲ್ ಅವರ ಪತ್ನಿ ಉಮ್ಮು ಅಲಿಮಾ,ಬೆಳ್ಳೂರು ಅಬ್ಬಾಸ್ ಎಂಬವರ ಪತ್ನಿ ನಫೀಸ ಸಾವನ್ನಪ್ಪಿದವರು.
ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…