ಮಂಗಳೂರು: ಕರ್ನಾಟಕ-ಕೇರಳ ಗಡಿ ಜಿಲ್ಲೆಯಾದ ಕಾಸರಗೋಡಿನ ಬದಿಯಡ್ಕ ಸಮೀಪ ಪಳ್ಳತ್ತಡ್ಕ ಎಂಬಲ್ಲಿ ಶಾಲಾ ಬಸ್-ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ.
ಶಾಲಾ ಮಕ್ಕಳನ್ನು ಬಿಟ್ಟು ಬರುತ್ತಿದ್ದ ಬಸ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದೆ. ಘಟನೆಯ ತೀವ್ರತೆಗೆ ಆಟೋ ನಜ್ಜುಗುಜ್ಜಾಗಿದ್ದು, ಆಟೋದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.
ಪೆರ್ಲೆ ಭಾಗದಿಂದ ಚಲಿಸುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಹಾಗೂ ಮೊಗ್ರಲ್ ಪುತ್ತೂರು ಮೂಲದ ಆಟೋ ನಡುವೆ ಅಪಘಾತ ನಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ.
ತಾಯಲಂಗಡಿ ನಿವಾಸಿ ಪ್ರಸ್ತುತ ಮೊಗ್ರಾಲಿನಲ್ಲಿ ವಾಸಿಸುವ ರಿಕ್ಷಾ ಡ್ರೈವರ್ ಅಬ್ದುಲ್ ರೌಪ್ (58), ಮೊಗ್ರಾಲಿನ ಉಸ್ಮಾನ್ ಎಂಬವರ ಪತ್ನಿ ಭಿಪಾತಿಮ್ಮ (50), ಷೇಕ್ ಅಲಿ ಎಂಬವರ ಪತ್ನಿ ಭಿಪಾತಿಮ್ಮ (60), ಇಸ್ಮಾಯಿಲ್ ಅವರ ಪತ್ನಿ ಉಮ್ಮು ಅಲಿಮಾ,ಬೆಳ್ಳೂರು ಅಬ್ಬಾಸ್ ಎಂಬವರ ಪತ್ನಿ ನಫೀಸ ಸಾವನ್ನಪ್ಪಿದವರು.
ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…