ಮಂಗಳೂರು: ಕರ್ನಾಟಕ-ಕೇರಳ ಗಡಿ ಜಿಲ್ಲೆಯಾದ ಕಾಸರಗೋಡಿನ ಬದಿಯಡ್ಕ ಸಮೀಪ ಪಳ್ಳತ್ತಡ್ಕ ಎಂಬಲ್ಲಿ ಶಾಲಾ ಬಸ್-ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ.
ಶಾಲಾ ಮಕ್ಕಳನ್ನು ಬಿಟ್ಟು ಬರುತ್ತಿದ್ದ ಬಸ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದೆ. ಘಟನೆಯ ತೀವ್ರತೆಗೆ ಆಟೋ ನಜ್ಜುಗುಜ್ಜಾಗಿದ್ದು, ಆಟೋದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.
ಪೆರ್ಲೆ ಭಾಗದಿಂದ ಚಲಿಸುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಹಾಗೂ ಮೊಗ್ರಲ್ ಪುತ್ತೂರು ಮೂಲದ ಆಟೋ ನಡುವೆ ಅಪಘಾತ ನಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ.
ತಾಯಲಂಗಡಿ ನಿವಾಸಿ ಪ್ರಸ್ತುತ ಮೊಗ್ರಾಲಿನಲ್ಲಿ ವಾಸಿಸುವ ರಿಕ್ಷಾ ಡ್ರೈವರ್ ಅಬ್ದುಲ್ ರೌಪ್ (58), ಮೊಗ್ರಾಲಿನ ಉಸ್ಮಾನ್ ಎಂಬವರ ಪತ್ನಿ ಭಿಪಾತಿಮ್ಮ (50), ಷೇಕ್ ಅಲಿ ಎಂಬವರ ಪತ್ನಿ ಭಿಪಾತಿಮ್ಮ (60), ಇಸ್ಮಾಯಿಲ್ ಅವರ ಪತ್ನಿ ಉಮ್ಮು ಅಲಿಮಾ,ಬೆಳ್ಳೂರು ಅಬ್ಬಾಸ್ ಎಂಬವರ ಪತ್ನಿ ನಫೀಸ ಸಾವನ್ನಪ್ಪಿದವರು.
ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…