ಜನ ಮನದ ನಾಡಿ ಮಿಡಿತ

Advertisement

ಕರಾವಳಿ ಪ್ರದೇಶದಲ್ಲಿ ಅಲಂಕಾರಿಕ ಮೀನುಕೃಷಿ ತರಬೇತಿ ಕಾರ್ಯಕ್ರಮ

ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್ ಎಫ್ ಡಿ ಬಿ) ಹೈದರಾಬಾದ್ ಇವರ ಸಹಯೋಗದೊಂದಿಗೆ ಮೀನುಗಾರಿಕೆ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ವಿಸ್ತರಣಾ ವಿಭಾಗ, ಮೀನುಗಾರಿಕಾ ಮಹಾವಿದ್ಯಾಲಯ, ಎಕ್ಕೂರು, ಮಂಗಳೂರಿನಲ್ಲಿ “ಕರಾವಳಿ ಪ್ರದೇಶದಲ್ಲಿ ಅಲಂಕಾರಿಕ ಮೀನುಕೃಷಿ” ಎಂಬ ವಿಷಯದ ಕುರಿತು ೩ ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹೇಶ್ ಕುಮಾರ್, ಪ್ರಧಾನ ವ್ಯವಸ್ಥಾಪಕರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ (ಕೆಎಫ್ ಡಿಸಿ) ಮಾತನಾಡಿ, “ಭಾರತ ದೇಶದಲ್ಲಿ ಅಲಂಕಾರಿಕ ಮೀನು ಸಂಪನ್ಮೂಲವು ಹೇರಳವಾಗಿದ್ದು, ಮೀನು ಕೃಷಿಕರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮವು ಸಹಕಾರಿಯಾಗಲಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಗೌರವಾನ್ವಿತ ಅತಿಥಿಯಾಗಿ ಆಗಮಿಸಿದ್ದ ಮಂಗಳೂರಿನ ಪ್ರಸಿದ್ಧ ಅಲಂಕಾರಿಕ ಮೀನುಕೃಷಿಯ ಉದ್ಯಮಿಯಾಗಿರುವ ರೊನಾಲ್ಡ್ ಡಿಸೋಜ, ಸಂಸ್ಥಾಪಕರು, ಅಕ್ವಾಟಿಕ್ ಬಯೋಸಿಸ್ಟಮ್, ವಾಮಂಜೂರು, ಮಂಗಳೂರು ಅವರು ಶಿಭಿರಾರ್ಥಿಗಳಿಗೆ ಅಲಂಕಾರಿಕ ಮೀನಿನ ಮಾರುಕಟ್ಟೆ ವ್ಯವಸ್ಥೆ ಕುರಿತು ಕಿರು ಪರಿಚಯ ನೀಡಿದರು. ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ರವರಾದ ಡಾ. ಹೆಚ್.ಏನ್. ಆಂಜನೇಯಪ್ಪರವರು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಾಗೂ ಸಂಯೋಜಕರಾದ ಡಾ. ಎಸ್. ಆರ್. ಸೋಮಶೇಖರ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ಕಾರ್ಯಕ್ರಮದ ನಿರೂಪಕಿಯಾದ ವಂದನಾ ಕೆ. ಅವರು ಮೀನುಕೃಷಿಕರು ಈ ತರಬೇತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಂಡರು. ಡಾ. ತೇಜಸ್ವಿ ಕುಮಾರ್ ಧನ್ಯವಾದ ಅರ್ಪಿಸಿದರು. ಮೀನುಗಾರಿಕಾ ಮಹಾವಿದ್ಯಾಲಯದ ಶಿಕ್ಷಕರು, ವಿದ್ಯಾರ್ಥಿಗಳು, 50 ಜನ ಶಿಬಿರಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!