ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್ ಎಫ್ ಡಿ ಬಿ) ಹೈದರಾಬಾದ್ ಇವರ ಸಹಯೋಗದೊಂದಿಗೆ ಮೀನುಗಾರಿಕೆ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ವಿಸ್ತರಣಾ ವಿಭಾಗ, ಮೀನುಗಾರಿಕಾ ಮಹಾವಿದ್ಯಾಲಯ, ಎಕ್ಕೂರು, ಮಂಗಳೂರಿನಲ್ಲಿ “ಕರಾವಳಿ ಪ್ರದೇಶದಲ್ಲಿ ಅಲಂಕಾರಿಕ ಮೀನುಕೃಷಿ” ಎಂಬ ವಿಷಯದ ಕುರಿತು ೩ ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಈ ಸಂದರ್ಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹೇಶ್ ಕುಮಾರ್, ಪ್ರಧಾನ ವ್ಯವಸ್ಥಾಪಕರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ (ಕೆಎಫ್ ಡಿಸಿ) ಮಾತನಾಡಿ, “ಭಾರತ ದೇಶದಲ್ಲಿ ಅಲಂಕಾರಿಕ ಮೀನು ಸಂಪನ್ಮೂಲವು ಹೇರಳವಾಗಿದ್ದು, ಮೀನು ಕೃಷಿಕರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮವು ಸಹಕಾರಿಯಾಗಲಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಗೌರವಾನ್ವಿತ ಅತಿಥಿಯಾಗಿ ಆಗಮಿಸಿದ್ದ ಮಂಗಳೂರಿನ ಪ್ರಸಿದ್ಧ ಅಲಂಕಾರಿಕ ಮೀನುಕೃಷಿಯ ಉದ್ಯಮಿಯಾಗಿರುವ ರೊನಾಲ್ಡ್ ಡಿಸೋಜ, ಸಂಸ್ಥಾಪಕರು, ಅಕ್ವಾಟಿಕ್ ಬಯೋಸಿಸ್ಟಮ್, ವಾಮಂಜೂರು, ಮಂಗಳೂರು ಅವರು ಶಿಭಿರಾರ್ಥಿಗಳಿಗೆ ಅಲಂಕಾರಿಕ ಮೀನಿನ ಮಾರುಕಟ್ಟೆ ವ್ಯವಸ್ಥೆ ಕುರಿತು ಕಿರು ಪರಿಚಯ ನೀಡಿದರು. ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ರವರಾದ ಡಾ. ಹೆಚ್.ಏನ್. ಆಂಜನೇಯಪ್ಪರವರು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಾಗೂ ಸಂಯೋಜಕರಾದ ಡಾ. ಎಸ್. ಆರ್. ಸೋಮಶೇಖರ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ಕಾರ್ಯಕ್ರಮದ ನಿರೂಪಕಿಯಾದ ವಂದನಾ ಕೆ. ಅವರು ಮೀನುಕೃಷಿಕರು ಈ ತರಬೇತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಂಡರು. ಡಾ. ತೇಜಸ್ವಿ ಕುಮಾರ್ ಧನ್ಯವಾದ ಅರ್ಪಿಸಿದರು. ಮೀನುಗಾರಿಕಾ ಮಹಾವಿದ್ಯಾಲಯದ ಶಿಕ್ಷಕರು, ವಿದ್ಯಾರ್ಥಿಗಳು, 50 ಜನ ಶಿಬಿರಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…