ಜನ ಮನದ ನಾಡಿ ಮಿಡಿತ

Advertisement

‘ಬೆಂಗಳೂರು ಬಂದ್’ ಬಗ್ಗೆ ಸಿಎಂ ಪ್ರತಿಕ್ರಿಯೆ; “ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬಾರದು” ಎಂ ಸಿದ್ದರಾಮಯ್ಯ ವಾಗ್ದಾಳಿ..!

ಕಾವೇರಿ ವಿಚಾರವನ್ನು ರಾಜಕೀಯಗೊಳಿಸ್ತಿರೋದು ರಾಜಕಾರಣಕ್ಕೆ ಹೊರತು ಜನರ ಹಿತದೃಷ್ಟಿಯಿಂದ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕಾವೇರಿ ವಿಚಾರವನ್ನು ರಾಜಕೀಯಗೊಳಿಸ್ತಿರೋದು ರಾಜಕಾರಣಕ್ಕೆ ಹೊರತು ಜನರ ಹಿತದೃಷ್ಟಿಯಿಂದ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ‘ಬೆಂಗಳೂರು ಬಂದ್’ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಬಂದ್ ಮಾಡಲು, ಪ್ರತಿಭಟನೆ ಮಾಡಿದ್ರೆ ನಮಗೇನೂ ಅಡ್ಡಿ ಇಲ್ಲ. ಆದರೆ ರಾಜಕೀಯ ದೃಷ್ಟಿಯಿಂದ ಬೆಂಗಳೂರು ಬಂದ್ ಮಾಡಿಸಲಾಗಿದೆ. ರಾಜ್ಯದ ಹಿತ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆ ಅಲ್ಲವೇ ಅಲ್ಲ. ನಮ್ಮದೇನೂ ತಕಾರರು ಇಲ್ಲ. ಯಾಕಂದರೆ ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕು, ಅವಕಾಶ ಇದೆ. ಆದ್ರೆ ಕೋರ್ಟ್‌ ಈ ಬಗ್ಗೆ ನಿರ್ಬಂಧ ಹೇರಿದ್ದು, ನಮ್ಮ ಮೂಲ ಹಕ್ಕುಗಳನ್ನು ವ್ಯಕ್ತಪಡಿಸುವ ಸಂದರ್ಭದಲ್ಲಿ, ಬೇರೆಯವ ಮೂಲ ಹಕ್ಕುಗಳಿಗೆ ದಕ್ಕೆ ಆಗಬಾರದು ಎಂದು ಹೇಳಿದೆ. ಹೀಗಾಗಿ ಪ್ರತಿಭಟನೆ ನಡೆಸುತ್ತಿರೋರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು. ಬಿಜೆಪಿ ನಿನ್ನೆ ಮಂಡ್ಯದಲ್ಲಿ ಚಡ್ಡಿ ಚಳವಳಿ ನಡೆಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ. ಈ ಮೊದಲು ನಾವು ಬಿಜೆಪಿಗರನ್ನು ಚಡ್ಡಿ ಎಂದು ಕರೆಯುತ್ತಿದ್ದೇವು. ಪಾಪ ಅವರು ಪ್ರತಿಭಟನೆ ಮಾಡಲಿ, ಆದರೆ ಈ ವಿಚಾರದಲ್ಲಿ ಅವರು ರಾಜಕೀಯ ಮಾಡಬಾರದು. ರಾಜಕೀಯ ಲಾಭಕ್ಕಾಗಿ ಅವರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯದ ಹಿತದೃಷ್ಟಿಯಿಂದ ಅವರು ಪ್ರತಿಭಟಿಸಿದ್ದರೆ ಒಳ್ಳೆಯದು ಎಂದರು. ಇದೇ ವೇಳೆ ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ವಿಚಾರವನ್ನು ಅವರೇ ಪ್ರಸ್ತಾಪಿಸಿ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅದು ರಾಜ್ಯದ ಹಿತ ದೃಷ್ಟಿಯಿಂದ ಒಳ್ಳೆಯದು. ಆದರೆ ಕರ್ನಾಟಕ ಸರ್ಕಾರ ಕಾವೇರಿ ನೀರು ವಿಚಾರದಲ್ಲಿ ವಿಫಲವಾಗಿದೆ ಎಂದು ಹೇಳೋದು ರಾಜಕೀಯ. ಕರ್ನಾಟಕ ಸರ್ಕಾರ ಯಾವತ್ತೂ ರಾಜ್ಯದ ಹಿತವನ್ನು ಕಾಪಾಡಲು ಹಿಂದೆ ಬಿದ್ದಿಲ್ಲ. ನಮಗೆ ಅಧಿಕಾರ ಮುಖ್ಯವಲ್ಲ, ರಾಜ್ಯದ ಹಿತ ಮುಖ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!