ಕಾವೇರಿ ವಿಚಾರವನ್ನು ರಾಜಕೀಯಗೊಳಿಸ್ತಿರೋದು ರಾಜಕಾರಣಕ್ಕೆ ಹೊರತು ಜನರ ಹಿತದೃಷ್ಟಿಯಿಂದ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕಾವೇರಿ ವಿಚಾರವನ್ನು ರಾಜಕೀಯಗೊಳಿಸ್ತಿರೋದು ರಾಜಕಾರಣಕ್ಕೆ ಹೊರತು ಜನರ ಹಿತದೃಷ್ಟಿಯಿಂದ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ‘ಬೆಂಗಳೂರು ಬಂದ್’ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಬಂದ್ ಮಾಡಲು, ಪ್ರತಿಭಟನೆ ಮಾಡಿದ್ರೆ ನಮಗೇನೂ ಅಡ್ಡಿ ಇಲ್ಲ. ಆದರೆ ರಾಜಕೀಯ ದೃಷ್ಟಿಯಿಂದ ಬೆಂಗಳೂರು ಬಂದ್ ಮಾಡಿಸಲಾಗಿದೆ. ರಾಜ್ಯದ ಹಿತ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆ ಅಲ್ಲವೇ ಅಲ್ಲ. ನಮ್ಮದೇನೂ ತಕಾರರು ಇಲ್ಲ. ಯಾಕಂದರೆ ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕು, ಅವಕಾಶ ಇದೆ. ಆದ್ರೆ ಕೋರ್ಟ್ ಈ ಬಗ್ಗೆ ನಿರ್ಬಂಧ ಹೇರಿದ್ದು, ನಮ್ಮ ಮೂಲ ಹಕ್ಕುಗಳನ್ನು ವ್ಯಕ್ತಪಡಿಸುವ ಸಂದರ್ಭದಲ್ಲಿ, ಬೇರೆಯವ ಮೂಲ ಹಕ್ಕುಗಳಿಗೆ ದಕ್ಕೆ ಆಗಬಾರದು ಎಂದು ಹೇಳಿದೆ. ಹೀಗಾಗಿ ಪ್ರತಿಭಟನೆ ನಡೆಸುತ್ತಿರೋರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು. ಬಿಜೆಪಿ ನಿನ್ನೆ ಮಂಡ್ಯದಲ್ಲಿ ಚಡ್ಡಿ ಚಳವಳಿ ನಡೆಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ. ಈ ಮೊದಲು ನಾವು ಬಿಜೆಪಿಗರನ್ನು ಚಡ್ಡಿ ಎಂದು ಕರೆಯುತ್ತಿದ್ದೇವು. ಪಾಪ ಅವರು ಪ್ರತಿಭಟನೆ ಮಾಡಲಿ, ಆದರೆ ಈ ವಿಚಾರದಲ್ಲಿ ಅವರು ರಾಜಕೀಯ ಮಾಡಬಾರದು. ರಾಜಕೀಯ ಲಾಭಕ್ಕಾಗಿ ಅವರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯದ ಹಿತದೃಷ್ಟಿಯಿಂದ ಅವರು ಪ್ರತಿಭಟಿಸಿದ್ದರೆ ಒಳ್ಳೆಯದು ಎಂದರು. ಇದೇ ವೇಳೆ ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ವಿಚಾರವನ್ನು ಅವರೇ ಪ್ರಸ್ತಾಪಿಸಿ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅದು ರಾಜ್ಯದ ಹಿತ ದೃಷ್ಟಿಯಿಂದ ಒಳ್ಳೆಯದು. ಆದರೆ ಕರ್ನಾಟಕ ಸರ್ಕಾರ ಕಾವೇರಿ ನೀರು ವಿಚಾರದಲ್ಲಿ ವಿಫಲವಾಗಿದೆ ಎಂದು ಹೇಳೋದು ರಾಜಕೀಯ. ಕರ್ನಾಟಕ ಸರ್ಕಾರ ಯಾವತ್ತೂ ರಾಜ್ಯದ ಹಿತವನ್ನು ಕಾಪಾಡಲು ಹಿಂದೆ ಬಿದ್ದಿಲ್ಲ. ನಮಗೆ ಅಧಿಕಾರ ಮುಖ್ಯವಲ್ಲ, ರಾಜ್ಯದ ಹಿತ ಮುಖ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…