ಲಕ್ನೋದಲ್ಲಿ ಬಿಜೆಪಿ ಶಾಸಕರೊಬ್ಬರ ಅಧಿಕೃತ ನಿವಾಸದ ಮೇಲಿನಿಂದ 24 ವರ್ಷದ ಯುವಕ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಲಕ್ನೋದಲ್ಲಿ ಬಿಜೆಪಿ ಶಾಸಕರೊಬ್ಬರ ಅಧಿಕೃತ ನಿವಾಸದ ಮೇಲಿನಿಂದ 24 ವರ್ಷದ ಯುವಕ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಯುವಕನನ್ನು ಶ್ರೇಷ್ಠಾ ತಿವಾರಿ ಎಂದು ಗುರುತಿಸಲಾಗಿದ್ದು, ಲಕ್ನೋದ ಬಕ್ಷಿ ಕಾ ತಲಾಬ್ನ ಬಿಜೆಪಿ ಶಾಸಕ ಯೋಗೇಶ್ ಶುಕ್ಲಾ ಅವರ ಮಾಧ್ಯಮ ಸಲಹೆಗಾರರಾಗಿ ಶ್ರೇಷ್ಠಾ ತಿವಾರಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಶ್ರೇಷ್ಠಾ ತಿವಾರಿ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದು, ಆಕೆಯ ಜತೆಗೆ ಜಗಳವಾಡಿ ಮನನೊಂದು ಆತ್ಮಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇನ್ನು ಈ ಯುವಕ ಆತ್ಮಹತ್ಯೆ ಮಾಡಿಕೊಳ್ಳವ ಮುನ್ನ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಯುವತಿಗೆ ವಿಡಿಯೋ ಕಾಲ್ ಮಾಡಿದ್ದು, ಈ ವೇಳೆ ಯುವತಿಯು ಈ ವಿಡಿಯೋ ಕಾಲ್ನ ಸ್ಕ್ರೀನ್ಶಾಟ್ಗಳನ್ನು ತೆಗೆದುಕೊಂಡಿದ್ದಾಳೆ. ಇಬ್ಬರು ನಾಲ್ಕು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಯಾವುದೋ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಂತರ ವಿಷಯ ತಿಳಿಯುತ್ತಿದ್ದಂತೆ ಯುವತಿ ಶ್ರೇಷ್ಠಾ ತಿವಾರಿ ಆತ್ಮಹತ್ಯೆ ಮಾಡಿಕೊಂಡು ಸ್ಥಳಕ್ಕೆ ಧಾವಿಸಿದ್ದಾಳೆ. ಪೊಲೀಸರ ವರದಿ ಪ್ರಕಾರ ಇಲ್ಲಿಯವರೆಗೆ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು? ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಜತೆಗೆ ಇದಕ್ಕೆ ಯಾವುದೇ ಪುರಾವೆಗಳು ಇಲ್ಲ ಎಂದು ಪೊಲೀಸ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ಪಾಂಡೆ ತಿಳಿಸಿದ್ದಾರೆ. ಇದೀಗ ಪೊಲೀಸರು ಹೆಚ್ಚಿನ ಮಾಹಿತಿಗಾಗಿ ಯುವತಿಯ ಮೊಬೈಲ್ನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…