ಜನ ಮನದ ನಾಡಿ ಮಿಡಿತ

Advertisement

ಅಡ್ಕಸ್ಥಳದಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಕರ್ನಾಟಕ ಸಾರಿಗೆ ಬಸ್ಸು ಡಿಕ್ಕಿ; ಮಣಿಯಂಪಾರೆ ನಿವಾಸಿ ಮೃತ್ಯು


ಪೆರ್ಲ : ಅಡಿಕೆ ಸಸಿಗಳನ್ನು ಹೇರಿಕೊಂಡು ಬರುವ ನಡುವೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಕರ್ನಾಟಕ ಸಾರಿಗೆ (ಕೆಎಸ್ಸಾರ್ಟಿಸಿ) ಬಸ್ಸು ಡಿಕ್ಕಿಯಾಗಿ ಪಿಕ್ ಆಪ್ ಚಾಲಕ ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಇಂದು (ಮಂಗಳವಾರ) ಬೆಳಗ್ಗೆ 9.15 ಗಂಟೆಯ ಸುಮಾರಿಗೆ ಅಡ್ಕಸ್ಥಳ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದ್ದು ಮಣಿಯಂಪಾರೆ ನಿವಾಸಿ ಮುಸ್ತಾಫ ಪಜ್ಜಾನ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಎದುರಿನಿಂದ ಬಂದ ಕಾರೊಂದನ್ನು ತಪ್ಪಿಸುವ ರಭಸದಲ್ಲಿ ಕೆ. ಎಸ್. ಆರ್. ಟಿ. ಸಿ. ಬಸ್ಸು ಪಿಕ್ ಆಪ್ ಗೆ ಬಡಿದಿದ್ದು ತಲೆಗೆ ತೀವ್ರ ಗಾಯಗೊಂಡಿರುವ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ದರು ಜೀವ ಉಳಿಸಲಾಗಿಲ್ಲ.

ಇವರು ಸಹ ಕೆಲಸಗಾರರೊಂದಿಗೆ ಅಡಿಕೆ ಸಸಿ ತರಲು ತೆರಳಿರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು ಜತೆಗಿದ್ದ ಇನ್ನೊರ್ವರಿಗೂ ಗಾಯಗಳಾಗಿರುವ ಬಗ್ಗೆ ತಿಳಿದು ಬಂದಿದೆ. ಬದಿಯಡ್ಕ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!