ಜನ ಮನದ ನಾಡಿ ಮಿಡಿತ

Advertisement

ಅಡ್ಕಸ್ಥಳದಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಕರ್ನಾಟಕ ಸಾರಿಗೆ ಬಸ್ಸು ಡಿಕ್ಕಿ; ಮಣಿಯಂಪಾರೆ ನಿವಾಸಿ ಮೃತ್ಯು


ಪೆರ್ಲ : ಅಡಿಕೆ ಸಸಿಗಳನ್ನು ಹೇರಿಕೊಂಡು ಬರುವ ನಡುವೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಕರ್ನಾಟಕ ಸಾರಿಗೆ (ಕೆಎಸ್ಸಾರ್ಟಿಸಿ) ಬಸ್ಸು ಡಿಕ್ಕಿಯಾಗಿ ಪಿಕ್ ಆಪ್ ಚಾಲಕ ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಇಂದು (ಮಂಗಳವಾರ) ಬೆಳಗ್ಗೆ 9.15 ಗಂಟೆಯ ಸುಮಾರಿಗೆ ಅಡ್ಕಸ್ಥಳ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದ್ದು ಮಣಿಯಂಪಾರೆ ನಿವಾಸಿ ಮುಸ್ತಾಫ ಪಜ್ಜಾನ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಎದುರಿನಿಂದ ಬಂದ ಕಾರೊಂದನ್ನು ತಪ್ಪಿಸುವ ರಭಸದಲ್ಲಿ ಕೆ. ಎಸ್. ಆರ್. ಟಿ. ಸಿ. ಬಸ್ಸು ಪಿಕ್ ಆಪ್ ಗೆ ಬಡಿದಿದ್ದು ತಲೆಗೆ ತೀವ್ರ ಗಾಯಗೊಂಡಿರುವ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ದರು ಜೀವ ಉಳಿಸಲಾಗಿಲ್ಲ.

ಇವರು ಸಹ ಕೆಲಸಗಾರರೊಂದಿಗೆ ಅಡಿಕೆ ಸಸಿ ತರಲು ತೆರಳಿರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು ಜತೆಗಿದ್ದ ಇನ್ನೊರ್ವರಿಗೂ ಗಾಯಗಳಾಗಿರುವ ಬಗ್ಗೆ ತಿಳಿದು ಬಂದಿದೆ. ಬದಿಯಡ್ಕ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!