ಪೆರ್ಲ : ಅಡಿಕೆ ಸಸಿಗಳನ್ನು ಹೇರಿಕೊಂಡು ಬರುವ ನಡುವೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಕರ್ನಾಟಕ ಸಾರಿಗೆ (ಕೆಎಸ್ಸಾರ್ಟಿಸಿ) ಬಸ್ಸು ಡಿಕ್ಕಿಯಾಗಿ ಪಿಕ್ ಆಪ್ ಚಾಲಕ ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಇಂದು (ಮಂಗಳವಾರ) ಬೆಳಗ್ಗೆ 9.15 ಗಂಟೆಯ ಸುಮಾರಿಗೆ ಅಡ್ಕಸ್ಥಳ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದ್ದು ಮಣಿಯಂಪಾರೆ ನಿವಾಸಿ ಮುಸ್ತಾಫ ಪಜ್ಜಾನ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಎದುರಿನಿಂದ ಬಂದ ಕಾರೊಂದನ್ನು ತಪ್ಪಿಸುವ ರಭಸದಲ್ಲಿ ಕೆ. ಎಸ್. ಆರ್. ಟಿ. ಸಿ. ಬಸ್ಸು ಪಿಕ್ ಆಪ್ ಗೆ ಬಡಿದಿದ್ದು ತಲೆಗೆ ತೀವ್ರ ಗಾಯಗೊಂಡಿರುವ ಮುಸ್ತಫಾರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ದರು ಜೀವ ಉಳಿಸಲಾಗಿಲ್ಲ.
ಇವರು ಸಹ ಕೆಲಸಗಾರರೊಂದಿಗೆ ಅಡಿಕೆ ಸಸಿ ತರಲು ತೆರಳಿರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು ಜತೆಗಿದ್ದ ಇನ್ನೊರ್ವರಿಗೂ ಗಾಯಗಳಾಗಿರುವ ಬಗ್ಗೆ ತಿಳಿದು ಬಂದಿದೆ. ಬದಿಯಡ್ಕ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…