ತಂದೆಯೇ ಪೊಲೀಸರ ಎದುರಿನಲ್ಲಿ ತನ್ನ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಅಮಾನವೀಯ ಘಟನೆ ನಡೆದಿದೆ.
ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದು, ಈತ ಹೆಂಡತಿ ಮಕ್ಕಳನ್ನು ಕೊಲ್ಲಲು ಮುಂದಾಗಿದ್ದು, ಇದರಿಂದ ಗಾಬರಿಗೊಂಡ ಪತ್ನಿ ತನ್ನ ಮಕ್ಕಳನ್ನು ಮನೆಯಲ್ಲೇ ಬಿಟ್ಟು ರಾತ್ರೋ ರಾತ್ರಿ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾಳೆ.
ಪೊಲೀಸರು ಆಕೆಯ ಮನೆಗೆ ಹೊರಡುತ್ತಿದ್ದಂತೆ ಆರೋಪಿ ಮಹೇಶ್ ತನ್ನ 6 ವರ್ಷದ ಮತ್ತು ಒಂದೂವರೆ ವರ್ಷದ ಹೆಣ್ಣು ಮಗುವನ್ನು ಕರೆದುಕೊಂಡು ಠಾಣೆಗೆ ಬಂದಿದ್ದಾನೆ. ಈ ವೇಳೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗ ” ನನ್ನ ಮಗುವಿಗೆ ಏನು ಬೇಕಾದರೂ ಮಾಡಬಹುದು ಅದನ್ನು ಕೇಳಲು ನೀವು ಯಾರು?” ಎಂದು ಪ್ರಶ್ನಿಸಿ, ಮಗುವನ್ನು ಕೊಲ್ಲಲು ಯತ್ನಿಸಿದ್ದಾನೆ.
ತಕ್ಷಣ ಪೊಲೀಸರು ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನೂ ಪೊಲೀಸರು ಆರೋಪಿ ಮಹೇಶ್ ವಿರುದ್ಧ ಸುಮೊಟೋ ಪ್ರಕರಣ ದಾಖಸಿಕೊಂಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…