ಮುಲ್ಕಿ: ಕೆಮ್ರಾಲ್ ಗ್ರಾಮ ಪಂಚಾಯತ್ ನ 2022- 23ನೇ ಸಾಲಿನ ಜಮಾ ಬಂಧಿ ಕಾರ್ಯಕ್ರಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪಂಚಾಯತ್ ಅಧ್ಯಕ್ಷ ಮಯ್ಶದ್ದಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಪಂಚಾಯತ್ ವತಿಯಿಂದ ಕಾಮಗಾರಿಗಳು ಗ್ರಾಮಸ್ಥರ ಸಹಕಾರದಿಂದ ನಿರಂತರವಾಗಿ ನಡೆಯುತ್ತಿದ್ದು ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕಾಮಗಾರಿಗಳ ಲೆಕ್ಕಪತ್ರ ಪರಿಶೀಲನೆಯ ಜಮಾಬಂಧಿ ಕಾರ್ಯಕ್ರಮವು ಪಾರದರ್ಶಕತೆಗೆ ಪೂರಕವಾಗಿದೆ. ಈ ಬಾರಿ ಕೆಮ್ರಾಲ್ ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಪಂಚಾಯತ್ ಸದಸ್ಯರ, ಆಡಳಿತ ಸಿಬ್ಬಂದಿ, ಗ್ರಾಮಸ್ಥರ ಸಹಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ತಾ.ಪಂ. ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಲೋಕೇಶ್ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಪಕ್ಷಭೇದ ಮರೆತು ಪ್ರಯತ್ನಿಸಬೇಕು ಎಂದರು.
ಪಿಡಿಒ ಅರುಣ್ ಪ್ರದೀಪ್ ಡಿಸೋಜಾ ಜಮಾ ಬಂದಿಯ ಖರ್ಚಿನ ವಿವರಗಳ ಬಗ್ಗೆ ಮಾಹಿತಿ ನೀಡಿದರು
ಸಭೆಯಲ್ಲಿ ಉಪಾಧ್ಯಕ್ಷೆ ಶೋಭಾ ಮಾಜೀ ಪಂ.ಅಧ್ಯಕ್ಷೆ ಲೀಲಾ ಕೃಷ್ಣಪ್ಪ, ಮಾಜಿ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಪಂಜ ,ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಹರಿಶ್ಚಂದ್ರ, ಲೆಕ್ಕ ಸಹಾಯಕ ಕೇಶವ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಇಲಾಖೆಯ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…