ಜನ ಮನದ ನಾಡಿ ಮಿಡಿತ

Advertisement

ಮಾದಕ ದ್ರವ್ಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ- ಮಾರುತಿ ಪಿ.

ಮುಲ್ಕಿ: ಮಾದಕ ದ್ರವ್ಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ. ಇದು ಮೆದುಳು ಮತ್ತು ನರಮಂಡಲದ ಬೂದು ದ್ರವ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ, ಇದರಿಂದ ಅವರಿಗೆ ಸರಿಯಾದ ಪ್ರತಿಕ್ರಿಯೆಯನ್ನು ನೀಡಲು ಕಷ್ಟಕರವಾಗುತ್ತದೆ.

ಮಾದಕ ವ್ಯಸನವು ಹಸಿವು ಮತ್ತು ತೂಕದ ತೀವ್ರ ನಷ್ಟ, ಮಲಬದ್ಧತೆ, ಹೆಚ್ಚಿದ ಆತಂಕ ಮತ್ತು ಕಿರಿಕಿರಿ, ನಿದ್ರಾಹೀನತೆ ಮತ್ತು ಬೌದ್ಧಿಕ ಕಾರ್ಯಚಟುವಟಿಕೆಗಳ ಕ್ರಮೇಣ ದುರ್ಬಲತೆಗೆ ಕಾರಣವಾಗಬಹುದು ಎಂದು ಮೂಲ್ಕಿ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಮಾರುತಿ ಪಿ. ಹೇಳಿದರು .ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಮಾದಕ ದ್ರವ್ಯ ಜಾಗೃತಿ ಅಭಿಯಾನದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ಜಿತೇಂದ್ರ ವಿ. ರಾವ್, ಡ್ರಗ್ ಕೇವಲ ಸೇವನೆ ಮಾಡುವವರ ಮೇಲೆ ಮಾತ್ರವಲ್ಲದೇ ಸಮಾಜದ ಮೇಲೆ ಕೂಡ ಭಾರೀ ಪರಿಣಾಮ ಹೊಂದಿದೆ. ಇದು ಸಾಮಾಜಿಕವಾಗಿ, ದೈಹಿಕವಾಗಿ, ಸಾಂಸ್ಕೃತಿಕವಾಗಿ, ಭಾವನಾತ್ಮಕವಾಗಿ ಮತ್ತು ಆರ್ಥಿಕವಾಗಿ ಹಾಳುಮಾಡುತ್ತದೆ ಇದರ ಬಗ್ಗೆ ಜಾಗೃತರಾಗಿ ಎಂದು ತಿಳಿಸಿದರು.

ಮೂಲ್ಕಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶ್ರೀದೇವಿ ಚೌಹಾಣ್ ಹಾಗೂ ಸುರೇಂದ್ರನ್ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ದಿವ್ಯಾ ಟಿ. ಶೆಟ್ಟಿ ಸ್ವಾಗತಿಸಿದರು, ಸಹ ಶಿಕ್ಷಕಿ ಹೇಮಲತಾ ವಂದಿಸಿದರು, ದೀಪಿಕ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!