ಮುಲ್ಕಿ: ಮಾದಕ ದ್ರವ್ಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ. ಇದು ಮೆದುಳು ಮತ್ತು ನರಮಂಡಲದ ಬೂದು ದ್ರವ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ, ಇದರಿಂದ ಅವರಿಗೆ ಸರಿಯಾದ ಪ್ರತಿಕ್ರಿಯೆಯನ್ನು ನೀಡಲು ಕಷ್ಟಕರವಾಗುತ್ತದೆ.
ಮಾದಕ ವ್ಯಸನವು ಹಸಿವು ಮತ್ತು ತೂಕದ ತೀವ್ರ ನಷ್ಟ, ಮಲಬದ್ಧತೆ, ಹೆಚ್ಚಿದ ಆತಂಕ ಮತ್ತು ಕಿರಿಕಿರಿ, ನಿದ್ರಾಹೀನತೆ ಮತ್ತು ಬೌದ್ಧಿಕ ಕಾರ್ಯಚಟುವಟಿಕೆಗಳ ಕ್ರಮೇಣ ದುರ್ಬಲತೆಗೆ ಕಾರಣವಾಗಬಹುದು ಎಂದು ಮೂಲ್ಕಿ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಮಾರುತಿ ಪಿ. ಹೇಳಿದರು .ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಮಾದಕ ದ್ರವ್ಯ ಜಾಗೃತಿ ಅಭಿಯಾನದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ಜಿತೇಂದ್ರ ವಿ. ರಾವ್, ಡ್ರಗ್ ಕೇವಲ ಸೇವನೆ ಮಾಡುವವರ ಮೇಲೆ ಮಾತ್ರವಲ್ಲದೇ ಸಮಾಜದ ಮೇಲೆ ಕೂಡ ಭಾರೀ ಪರಿಣಾಮ ಹೊಂದಿದೆ. ಇದು ಸಾಮಾಜಿಕವಾಗಿ, ದೈಹಿಕವಾಗಿ, ಸಾಂಸ್ಕೃತಿಕವಾಗಿ, ಭಾವನಾತ್ಮಕವಾಗಿ ಮತ್ತು ಆರ್ಥಿಕವಾಗಿ ಹಾಳುಮಾಡುತ್ತದೆ ಇದರ ಬಗ್ಗೆ ಜಾಗೃತರಾಗಿ ಎಂದು ತಿಳಿಸಿದರು.
ಮೂಲ್ಕಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶ್ರೀದೇವಿ ಚೌಹಾಣ್ ಹಾಗೂ ಸುರೇಂದ್ರನ್ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ದಿವ್ಯಾ ಟಿ. ಶೆಟ್ಟಿ ಸ್ವಾಗತಿಸಿದರು, ಸಹ ಶಿಕ್ಷಕಿ ಹೇಮಲತಾ ವಂದಿಸಿದರು, ದೀಪಿಕ ಕಾರ್ಯಕ್ರಮ ನಿರೂಪಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…