ಮುಲ್ಕಿ: ಮಾದಕ ದ್ರವ್ಯ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆಯ ಭಾವನೆಯನ್ನು ಉಂಟುಮಾಡುತ್ತದೆ. ಇದು ಮೆದುಳು ಮತ್ತು ನರಮಂಡಲದ ಬೂದು ದ್ರವ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ, ಇದರಿಂದ ಅವರಿಗೆ ಸರಿಯಾದ ಪ್ರತಿಕ್ರಿಯೆಯನ್ನು ನೀಡಲು ಕಷ್ಟಕರವಾಗುತ್ತದೆ.
ಮಾದಕ ವ್ಯಸನವು ಹಸಿವು ಮತ್ತು ತೂಕದ ತೀವ್ರ ನಷ್ಟ, ಮಲಬದ್ಧತೆ, ಹೆಚ್ಚಿದ ಆತಂಕ ಮತ್ತು ಕಿರಿಕಿರಿ, ನಿದ್ರಾಹೀನತೆ ಮತ್ತು ಬೌದ್ಧಿಕ ಕಾರ್ಯಚಟುವಟಿಕೆಗಳ ಕ್ರಮೇಣ ದುರ್ಬಲತೆಗೆ ಕಾರಣವಾಗಬಹುದು ಎಂದು ಮೂಲ್ಕಿ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಮಾರುತಿ ಪಿ. ಹೇಳಿದರು .ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಮಾದಕ ದ್ರವ್ಯ ಜಾಗೃತಿ ಅಭಿಯಾನದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ಜಿತೇಂದ್ರ ವಿ. ರಾವ್, ಡ್ರಗ್ ಕೇವಲ ಸೇವನೆ ಮಾಡುವವರ ಮೇಲೆ ಮಾತ್ರವಲ್ಲದೇ ಸಮಾಜದ ಮೇಲೆ ಕೂಡ ಭಾರೀ ಪರಿಣಾಮ ಹೊಂದಿದೆ. ಇದು ಸಾಮಾಜಿಕವಾಗಿ, ದೈಹಿಕವಾಗಿ, ಸಾಂಸ್ಕೃತಿಕವಾಗಿ, ಭಾವನಾತ್ಮಕವಾಗಿ ಮತ್ತು ಆರ್ಥಿಕವಾಗಿ ಹಾಳುಮಾಡುತ್ತದೆ ಇದರ ಬಗ್ಗೆ ಜಾಗೃತರಾಗಿ ಎಂದು ತಿಳಿಸಿದರು.
ಮೂಲ್ಕಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶ್ರೀದೇವಿ ಚೌಹಾಣ್ ಹಾಗೂ ಸುರೇಂದ್ರನ್ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲರಾದ ದಿವ್ಯಾ ಟಿ. ಶೆಟ್ಟಿ ಸ್ವಾಗತಿಸಿದರು, ಸಹ ಶಿಕ್ಷಕಿ ಹೇಮಲತಾ ವಂದಿಸಿದರು, ದೀಪಿಕ ಕಾರ್ಯಕ್ರಮ ನಿರೂಪಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…