ಮೂಡಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ.
ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್( 22 ವ), ಫರ್ಹಾನ್ ಖಾನ್ (18ವ) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು. ಇವರು ಮೂವರು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಆರೋಪಿಗಳಿಂದ ಸ್ವಾಧೀನ ಸೊತ್ತುಗಳ ಅಂದಾಜು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ದಿನೇಶ್ ಕುಮಾರ್, ಮಂಗಳೂರು ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನಿರ್ದೇಶನದಲ್ಲಿ ಈ ಕಾರ್ಯಚರಣೆ ನಡೆದಿದ್ದು, ಪೊಲೀಸ್ ಉಪ ನಿರೀಕ್ಷಕರಾದ ದಿವಾಕರ ರೈ, ಸಿದ್ದಪ್ಪ ನರನೂರ ಮತ್ತು ಸಿಬಂದಿಗಳಾದ ಪ್ರಶಾಂತ್, ಮಹಮ್ಮದ್ ಇಕ್ಬಾಲ್, ಮಹಮ್ಮದ್ ಹುಸೇನ್, ಅಕೀಲ್ ಮಹಮ್ಮದ್, ವೆಂಕಟೇಶ್ ಮತ್ತು ಇತರ ಸಿಬಂದಿಗಳು ಕಾರ್ಯಚರಣೆಯಲ್ಲಿ ಪಾಲ್ಹೊಂಡಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…