ಮೂಡಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ.
ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್( 22 ವ), ಫರ್ಹಾನ್ ಖಾನ್ (18ವ) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು. ಇವರು ಮೂವರು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಆರೋಪಿಗಳಿಂದ ಸ್ವಾಧೀನ ಸೊತ್ತುಗಳ ಅಂದಾಜು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ದಿನೇಶ್ ಕುಮಾರ್, ಮಂಗಳೂರು ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನಿರ್ದೇಶನದಲ್ಲಿ ಈ ಕಾರ್ಯಚರಣೆ ನಡೆದಿದ್ದು, ಪೊಲೀಸ್ ಉಪ ನಿರೀಕ್ಷಕರಾದ ದಿವಾಕರ ರೈ, ಸಿದ್ದಪ್ಪ ನರನೂರ ಮತ್ತು ಸಿಬಂದಿಗಳಾದ ಪ್ರಶಾಂತ್, ಮಹಮ್ಮದ್ ಇಕ್ಬಾಲ್, ಮಹಮ್ಮದ್ ಹುಸೇನ್, ಅಕೀಲ್ ಮಹಮ್ಮದ್, ವೆಂಕಟೇಶ್ ಮತ್ತು ಇತರ ಸಿಬಂದಿಗಳು ಕಾರ್ಯಚರಣೆಯಲ್ಲಿ ಪಾಲ್ಹೊಂಡಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…