ಕಿನ್ನಿಗೋಳಿ : ವಿದ್ಯಾರ್ಥಿ ದೆಸೆಯಲ್ಲಿ ಮನಸ್ಸಿದ್ದೋ ಇಲ್ಲದೆಯೋ ಮಾಡುವ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳು ಮುಂದೆ ನಮ್ಮ ಜೀವನದಲ್ಲಿ ಮಹತ್ವದ ವ್ಯಕ್ತಿತ್ವದ ಬೆಳವಣಿಗೆಗೆ ವಿಶೇಷ ಪಾತ್ರವನ್ನು ವಹಿಸುತ್ತವೆ ಎಂದು ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರುರವರು ವಿದ್ಯಾರ್ಥಿಗಳಿಗೆ ಹೇಳಿದರು.
ಅವರು ಪೊಂಪೈ ಕಾಲೇಜು ಐಕಳದ ‘ಎನ್.ಎಸ್.ಎಸ್ ದಿನ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ಸೇವಾ ದಿನಾಚರಣೆಯ ಶುಭ ಸಂದರ್ಭದಲ್ಲಿ ಯುವ ಸಮಾಜ ಸೇವಕರಾದ ದೇವಪ್ರಸಾದ್ ಪುನರೂರು ಅವರನ್ನು ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪ್ರಾಂಶುಪಾಲರಾದ ಡಾ. ಪುರುಷೋತ್ತಮ ಕೆ.ವಿ.ಯವರು ಅಧ್ಯಕ್ಷತೆಯನ್ನು ವಹಿಸಿದ್ದು, ದೇವಪ್ರಸಾದರು ಸ್ಥಾಪಕಾಧ್ಯಕ್ಷರಾಗಿರುವ ಪುನರೂರು ಪ್ರತಿಷ್ಠಾನದ ಸೇವಾಕಾರ್ಯಗಳನ್ನು ಶ್ಲಾಘಿಸಿದರು.
ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ನೇಮಿಚಂದ್ರ ಗೌಡ ಎಂ., ಸಹ ಅಧಿಕಾರಿ ಶ್ರೀಮತಿ ಆಶಾಲತಾ ಟಿ.ಜಿ., ಘಟಕದ ವಿದ್ಯಾರ್ಥಿ ನಾಯಕ ಯೋಗಾನಂದರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎನ್.ಎಸ್.ಎಸ್ ಘಟಕದ ನೇಹಾ ಸ್ವಾಗತಿಸಿ, ಸನ್ನಿಧಿ ವಂದಿಸಿದರು. ಸಾನಿಯಾ ಕಾರ್ಯಕ್ರಮ ನಿರೂಪಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…