ಕಿನ್ನಿಗೋಳಿ : ವಿದ್ಯಾರ್ಥಿ ದೆಸೆಯಲ್ಲಿ ಮನಸ್ಸಿದ್ದೋ ಇಲ್ಲದೆಯೋ ಮಾಡುವ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳು ಮುಂದೆ ನಮ್ಮ ಜೀವನದಲ್ಲಿ ಮಹತ್ವದ ವ್ಯಕ್ತಿತ್ವದ ಬೆಳವಣಿಗೆಗೆ ವಿಶೇಷ ಪಾತ್ರವನ್ನು ವಹಿಸುತ್ತವೆ ಎಂದು ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರುರವರು ವಿದ್ಯಾರ್ಥಿಗಳಿಗೆ ಹೇಳಿದರು.
ಅವರು ಪೊಂಪೈ ಕಾಲೇಜು ಐಕಳದ ‘ಎನ್.ಎಸ್.ಎಸ್ ದಿನ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ಸೇವಾ ದಿನಾಚರಣೆಯ ಶುಭ ಸಂದರ್ಭದಲ್ಲಿ ಯುವ ಸಮಾಜ ಸೇವಕರಾದ ದೇವಪ್ರಸಾದ್ ಪುನರೂರು ಅವರನ್ನು ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪ್ರಾಂಶುಪಾಲರಾದ ಡಾ. ಪುರುಷೋತ್ತಮ ಕೆ.ವಿ.ಯವರು ಅಧ್ಯಕ್ಷತೆಯನ್ನು ವಹಿಸಿದ್ದು, ದೇವಪ್ರಸಾದರು ಸ್ಥಾಪಕಾಧ್ಯಕ್ಷರಾಗಿರುವ ಪುನರೂರು ಪ್ರತಿಷ್ಠಾನದ ಸೇವಾಕಾರ್ಯಗಳನ್ನು ಶ್ಲಾಘಿಸಿದರು.
ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ನೇಮಿಚಂದ್ರ ಗೌಡ ಎಂ., ಸಹ ಅಧಿಕಾರಿ ಶ್ರೀಮತಿ ಆಶಾಲತಾ ಟಿ.ಜಿ., ಘಟಕದ ವಿದ್ಯಾರ್ಥಿ ನಾಯಕ ಯೋಗಾನಂದರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎನ್.ಎಸ್.ಎಸ್ ಘಟಕದ ನೇಹಾ ಸ್ವಾಗತಿಸಿ, ಸನ್ನಿಧಿ ವಂದಿಸಿದರು. ಸಾನಿಯಾ ಕಾರ್ಯಕ್ರಮ ನಿರೂಪಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…