ಮೂಡಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಐವರು ವಿದ್ಯಾರ್ಥಿಗಳು ಪ್ರತಿಷ್ಟಿತ ಲಂಡನ್ ಸ್ಟಾಕ್ ಎಕ್ಸಚೇಂಜ್ ಗ್ರೂಪ್ಗೆ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗೆ ತಲಾ 11.5ಲಕ್ಷ ಪ್ಯಾಕೇಜ್ನೊಂದಿಗೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಿಜಾರಿನಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ ನಡೆದಿತ್ತು.
ಕೊನೆಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ವಿನಯ್ ಪಿ ಹುಂಡೇಕರ್ (ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್), ಖುಷಿ ವಿಕೆ (ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್), ಶ್ವೇತಾ ಶರ್ಮಾ(ಇನ್ಫೋðಮೇಷನ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್)ಜೇಮ್ಸ್ ಜೋಸೆಫ್ (ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್), ಶ್ವೇತಾ ಸಿ(ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್) ಉನ್ನತ ಪ್ಯಾಕೇಜ್ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.
ವಿಶ್ವದ ಪ್ರಮುಖ ಹಣಕಾಸು ಮಾರುಕಟ್ಟೆಗಳ ಮೂಲಸೌಕರ್ಯ ಪೂರೈಕೆದಾರರಲ್ಲಿ ಒಂದಾಗಿರುವ ಲಂಡನ್ ಸ್ಟಾಕ್ ಎಕ್ಸಚೇಂಜ್ ಕಂಪೆನಿಯು, ಪ್ರಪಂಚದ 190 ದೇಶಗಳಲ್ಲಿ 40,000 ಕ್ಕೂ ಹೆಚ್ಚು ಗ್ರಾಹಕರಿಗೆ ಹಣಕಾಸಿನ ಡೇಟಾ, ವಿಶ್ಲೇಷಣೆಗಳು, ಸುದ್ದಿ ಮತ್ತು ಸೂಚ್ಯಂಕದ ಮಾಹಿತಿಯನ್ನು ನೀಡುತ್ತಿದೆ.
ಆಳ್ವಾಸ್ ಶಿಕ್ಷಣ ಸಂಸ್ಥೆಗಳಲ್ಲಿ ಒಂದು ಶೈಕ್ಷಣಿಕ ವರ್ಷದಲ್ಲಿ ಸರಾಸರಿ 400ಕ್ಕೂ ಅಧಿಕ ಕಂಪೆನಿಗಳು ನೇಮಕಾತಿಗಾಗಿ ಕ್ಯಾಂಪಸ್ಗೆ ಆಗಮಿಸುತ್ತವೆ. ಇಲ್ಲಿ ವಿದ್ಯಾಭ್ಯಾಸ ಮಾಡುವ 90ಶೇಕಡಾ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕವೇ ಉದ್ಯೋಗ ಪಡೆಯುತ್ತಿರುವುದು ಹೆಮ್ಮೆಯ ವಿಶೇಷ. ದೇಶದ ಉನ್ನತ ಕಂಪೆನಿಗಳಾದ ಸ್ಯಾಪ್ ಲ್ಯಾಬ್ಸ್, ಇವೈ, ಕಾಗ್ನಿಝೆಂಟ್, ಅಮೇಜಾನ್, ಟಿಸಿಎಸ್, ಕೆಪಿಎಂಜಿ, ಟೊಯೋಟೊ ಕಿರ್ಲೋಸ್ಕರ್, ಎಕ್ಸೇಂಚರ್, ವಿಧುಮ್ ನೇರ ನೇಮಕಾತಿಗಾಗಿ ಸದಾ ಕ್ಯಾಂಪಸ್ಗೆ ಆಗಮಿಸುತ್ತವೆ. ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿಯ ಜೊತೆಗೆ, ಪ್ರತಿ ವರ್ಷ ನಡೆಯುವ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅವಕಾಶವೂ ಇರುತ್ತದೆ.
ಕಳೆದ ಶೈಕ್ಷಣಿಕ ವರ್ಷದಲ್ಲಿ, ಆಳ್ವಾಸ್ ಇಂಜಿನಿಯರಿ0ಗ್ ಕಾಲೇಜಿನ ವಿದ್ಯಾರ್ಥಿಗಳಾದ ತುಳಸಿ ಹಾಗೂ ಅನೂಜ್ ಪ್ರತಿಷ್ಟಿತ ಫಿನ್ಟೆಕ್ ಕಂಪೆನಿ -ಜಸ್ಪೇಗೆ ೨೧ ಲಕ್ಷದ ಪ್ಯಾಕೇಜ್ಗೆ ಆಯ್ಕೆಯಾಗಿರುವುದು ಸಂಸ್ಥೆಯ ಗುಣಮಟ್ಟದ ಶಿಕ್ಷಣ ಹಾಗೂ ತರಬೇತಿಗೆ ಹಿಡಿದ ಕೈಗನ್ನಡಿ ಯಾಗಿದೆ.
ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…