ಮೂಡಬಿದಿರೆ: ‘ಸ್ವಯಂ ರಕ್ಷಣೆಯೇ ಅತ್ಯುತ್ತಮ ರಕ್ಷಣೆ’ ಎಂದು ಸ್ವರಕ್ಷಾ ಫಾರ್ ವುಮೆನ್ ಟ್ರಸ್ಟ್ ಸಂಸ್ಥಾಪಕ ಕಾರ್ತಿಕ್ ಎಸ್. ಕಟೀಲ್ ಹೇಳಿದರು.
ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಈಚೆಗೆ ಹಮ್ಮಿಕೊಂಡ ‘ಮಹಿಳೆಯರಿಗೆ ಸ್ವರಕ್ಷಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೈಹಿಕ ಮತ್ತು ಮಾನಸಿಕ ದೌರ್ಜನ್ಯಗಳಿದ್ದು, ಶೇಕಡಾ 98.2ರಷ್ಟು ದೌರ್ಜನ್ಯಗಳು ಪರಿಚಿತರಿಂದಲೇ ನಡೆದಿವೆ. ಮೊಬೈಲ್ ಸೇರಿದಂತೆ ಯಾವುದೇ ವೈಯಕ್ತಿಕ ವಸ್ತುಗಳನ್ನು ಇತರರ ಜೊತೆ ಹಂಚಿಕೊಳ್ಳಬಾರದು ಎಂದರು.
‘ಅತಿಯಾದ ನಂಬಿಕೆ, ಅವಲಂಬನೆ, ವ್ಯಾಮೋಹಕ್ಕೆ ಒಳಗಾಗಬಾರದು. ಉಚಿತ ಮತ್ತಿತರ ಆಮಿಷದ ಸೆಳೆತಕ್ಕೂ ಒಳಗಾಗಬೇಡಿ. ವಾಹನಗಳಲ್ಲೂ ಅನಗತ್ಯ ‘ಡ್ರಾಪ್’ ನೀಡುವುದು ಅಥವಾ ಪಡೆಯುವುದು ಬೇಡ’ ಎಂದರು.
‘ಒಳ್ಳೆಯ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಬೇಕು’ ಎಂದು ಪೋಷಕರಿಗೆ ತಿಳಿಸಿದರು.
ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಸಂಯೋಜಕಿ ವಿನೆಟ್ ಚಂದನ ಮಸ್ಕರೇನಸ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ರಾಘವೇಂದ್ರ ಎನ್., ವಿಜ್ಞಾನ ವಿಭಾಗ-೯ರ ಸಂಯೋಜಕಿ ವಿದ್ಯಾ ಕೆ., ಕಾರ್ತಿಕ್ ಎಸ್. ಕಟೀಲ್ ಅವರ ತಾಯಿ ಶೋಭಲತಾ ಇದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…