ಮೂಡಬಿದಿರೆ: ‘ಸ್ವಯಂ ರಕ್ಷಣೆಯೇ ಅತ್ಯುತ್ತಮ ರಕ್ಷಣೆ’ ಎಂದು ಸ್ವರಕ್ಷಾ ಫಾರ್ ವುಮೆನ್ ಟ್ರಸ್ಟ್ ಸಂಸ್ಥಾಪಕ ಕಾರ್ತಿಕ್ ಎಸ್. ಕಟೀಲ್ ಹೇಳಿದರು.
ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಈಚೆಗೆ ಹಮ್ಮಿಕೊಂಡ ‘ಮಹಿಳೆಯರಿಗೆ ಸ್ವರಕ್ಷಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೈಹಿಕ ಮತ್ತು ಮಾನಸಿಕ ದೌರ್ಜನ್ಯಗಳಿದ್ದು, ಶೇಕಡಾ 98.2ರಷ್ಟು ದೌರ್ಜನ್ಯಗಳು ಪರಿಚಿತರಿಂದಲೇ ನಡೆದಿವೆ. ಮೊಬೈಲ್ ಸೇರಿದಂತೆ ಯಾವುದೇ ವೈಯಕ್ತಿಕ ವಸ್ತುಗಳನ್ನು ಇತರರ ಜೊತೆ ಹಂಚಿಕೊಳ್ಳಬಾರದು ಎಂದರು.
‘ಅತಿಯಾದ ನಂಬಿಕೆ, ಅವಲಂಬನೆ, ವ್ಯಾಮೋಹಕ್ಕೆ ಒಳಗಾಗಬಾರದು. ಉಚಿತ ಮತ್ತಿತರ ಆಮಿಷದ ಸೆಳೆತಕ್ಕೂ ಒಳಗಾಗಬೇಡಿ. ವಾಹನಗಳಲ್ಲೂ ಅನಗತ್ಯ ‘ಡ್ರಾಪ್’ ನೀಡುವುದು ಅಥವಾ ಪಡೆಯುವುದು ಬೇಡ’ ಎಂದರು.
‘ಒಳ್ಳೆಯ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಬೇಕು’ ಎಂದು ಪೋಷಕರಿಗೆ ತಿಳಿಸಿದರು.
ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಸಂಯೋಜಕಿ ವಿನೆಟ್ ಚಂದನ ಮಸ್ಕರೇನಸ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ರಾಘವೇಂದ್ರ ಎನ್., ವಿಜ್ಞಾನ ವಿಭಾಗ-೯ರ ಸಂಯೋಜಕಿ ವಿದ್ಯಾ ಕೆ., ಕಾರ್ತಿಕ್ ಎಸ್. ಕಟೀಲ್ ಅವರ ತಾಯಿ ಶೋಭಲತಾ ಇದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…