ಕರಾವಳಿ

ಕೌಶಲ ಕರಗತ ಮಾಡಿಕೊಳ್ಳಿ; ಬೆಂಗಳೂರು ಇನ್ಫೋಸಿಸ್ ಬಿಪಿಎಂನ ಸಹ ಉಪಾಧ್ಯಕ್ಷ ಶೇಖರ್ ಗಣೇಶನ್

ಮೂಡಬಿದಿರೆ: ‘ವಿದ್ಯಾರ್ಥಿ ಜೀವನದಲ್ಲಿ ಹೆಚ್ಚುವರಿ ಕೌಶಲವನ್ನು ಕರಗತ ಮಾಡಿಕೊಳ್ಳಬೇಕು’ ಎಂದು ಬೆಂಗಳೂರು ಇನ್ಫೋಸಿಸ್ ಬಿಪಿಎಂನ ಸಹ ಉಪಾಧ್ಯಕ್ಷ ಶೇಖರ್ ಗಣೇಶನ್ ಹೇಳಿದರು.


ಇನ್ಫೋಸಿಸ್ ಬಿಪಿಎಂ ಹಮ್ಮಿಕೊಂಡ ‘ಕಲಿಕೆ ವೇಳೆ ಗಳಿಕೆ’ (ಅರ್ನ್ ವೈಲ್ ಲರ್ನ್) ಹಾಗೂ ಕರ‍್ಯಸ್ಥಳ (ವರ್ಕಸ್ಟೇಷನ್) ಸ್ಥಾಪನೆಯ ಕುರಿತ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ವಿದ್ಯಾರ್ಥಿ ಜೀವನದಲ್ಲಿ ಹೆಚ್ಚುವರಿ ಅವಧಿ ಪರಿಶ್ರಮ ಹಾಕುವುದರಿಂದ ಸ್ವಲ್ಪ ಒತ್ತಡ ಉಂಟಾಗಬಹುದು. ಆದರೆ, ಅದು ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿ ಆಗುತ್ತದೆ ಎಂದರು.ವಿದ್ಯಾರ್ಥಿಗಳಿಗೆ ನಾವು 18 ತಿಂಗಳು ಅರೆಕಾಲಿಕ ಕೆಲಸ ಮಾಡಲು ಅವಕಾಶ ಕಲ್ಪಿಸುತ್ತಿದ್ದು, ಈ ಬಗ್ಗೆ ಸಂದರ್ಶನ ನಡೆಸಲಿದ್ದೇವೆ. ಈ ಯೋಜನೆಯ ಮೂಲಕ ವಿದ್ಯಾರ್ಥಿ ನೆಲೆಯಲ್ಲಿಯೆ ದುಡಿಮೆಯ ಅವಕಾಶವನ್ನು ಪಡೆಯಬಹುದು. ಇದು ವಿದ್ಯಾರ್ಥಿಯ ಭವಿಷ್ಯದ ದೃಷ್ಟಿಯಿಂದ ಕೆಲಸದ ಮೇಲಿನ ಹಿಡಿತ ಹಾಗೂ ಹಣಕಾಸಿನ ಭದ್ರತೆಗೆ ಸಹಕಾರಿ ಎಂದರು.


ನಂತರ ತಂಡದ ಸದಸ್ಯರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿ ಇನ್ಫೋಸಿಸ್ ಬಿಪಿಎಂನ ಕರ‍್ಯಸ್ಥಾನ ತೆರೆಯುವ ಕುರಿತು ಸ್ಥಳ ಪರಿಶೀಲನೆ ಹಾಗೂ ಚರ್ಚೆ ನಡೆಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಸಿಡಿಲು ಬಡಿದು ದೇವಾಲಯದ ಅರ್ಚಕರೊಬ್ಬರು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರು ಗ್ರಾಮದ…

3 hours ago

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

ಮಂಗಳೂರಿನ ಯೆಯ್ಯಾಡಿ ಗುಂಡಳಿಕೆ ನಿವಾಸಿ 35ರ ಹರೆಯದ ಪ್ರಜ್ವಲ್ ಪೂಜಾರಿ ಅವರು ಹೃ*ದಯಾಘಾತದಿಂದ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ. ಹಿಂದೂ ಜಾಗರಣ…

3 hours ago

ಬಂಟ್ವಾಳ: ಬಿಸಿಲಿನ ತಾಪ ಹಾಗೂ ಮಳೆಯ ನಡುವೆ ಬಂಟ್ವಾಳ ತಾಲೂಕಿನಲ್ಲಿ ಜ್ವರದ ಬಾದೆ….!

ಬಿಸಿಲಿನ ತಾಪ ಹಾಗೂ ಕಣ್ಣು ಮುಚ್ಚಾಳೆಯ ಮಳೆಯ ನಡುವೆ ಬಂಟ್ವಾಳ ತಾಲೂಕಿನಲ್ಲಿ ಜ್ವರದ ಬಾದೆ ಹೆಚ್ಚಾಗುತ್ತಿದೆ. ಬಂಟ್ವಾಳ ತಾಲೂಕಿನ ನಂದಾವರ…

4 hours ago

ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ಪತ್ತೆ..!

ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಲಾಗಿದೆ. ಭಜರಂಗದಳ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಮಂಗಳೂರು…

5 hours ago

ಬೆಂಗಳೂರು: “ವಿದ್ಯಾರ್ಥಿಯ ಶಿಕ್ಷಣದ ಹಕ್ಕಿಗೆ ಧಕ್ಕೆ ಉಂಟಾಗದಂತೆ ಸಂಸ್ಥೆಗಳು ಸೂಕ್ಷ್ಮತೆಯಿಂದ ವರ್ತಿಸಬೇಕು”

ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಹಕ್ಕುಗಳನ್ನು ಗೌರವಿಸುವ ದಿಸೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಬ್ಯಾರಿಸ್ ಸೆಂಟ್ರಲ್ ಕಮಿಟಿಯು…

6 hours ago

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ..!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ…

6 hours ago