ಮೂಡಬಿದಿರೆ: ‘ವಿದ್ಯಾರ್ಥಿ ಜೀವನದಲ್ಲಿ ಹೆಚ್ಚುವರಿ ಕೌಶಲವನ್ನು ಕರಗತ ಮಾಡಿಕೊಳ್ಳಬೇಕು’ ಎಂದು ಬೆಂಗಳೂರು ಇನ್ಫೋಸಿಸ್ ಬಿಪಿಎಂನ ಸಹ ಉಪಾಧ್ಯಕ್ಷ ಶೇಖರ್ ಗಣೇಶನ್ ಹೇಳಿದರು.
ಇನ್ಫೋಸಿಸ್ ಬಿಪಿಎಂ ಹಮ್ಮಿಕೊಂಡ ‘ಕಲಿಕೆ ವೇಳೆ ಗಳಿಕೆ’ (ಅರ್ನ್ ವೈಲ್ ಲರ್ನ್) ಹಾಗೂ ಕರ್ಯಸ್ಥಳ (ವರ್ಕಸ್ಟೇಷನ್) ಸ್ಥಾಪನೆಯ ಕುರಿತ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಹೆಚ್ಚುವರಿ ಅವಧಿ ಪರಿಶ್ರಮ ಹಾಕುವುದರಿಂದ ಸ್ವಲ್ಪ ಒತ್ತಡ ಉಂಟಾಗಬಹುದು. ಆದರೆ, ಅದು ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿ ಆಗುತ್ತದೆ ಎಂದರು.ವಿದ್ಯಾರ್ಥಿಗಳಿಗೆ ನಾವು 18 ತಿಂಗಳು ಅರೆಕಾಲಿಕ ಕೆಲಸ ಮಾಡಲು ಅವಕಾಶ ಕಲ್ಪಿಸುತ್ತಿದ್ದು, ಈ ಬಗ್ಗೆ ಸಂದರ್ಶನ ನಡೆಸಲಿದ್ದೇವೆ. ಈ ಯೋಜನೆಯ ಮೂಲಕ ವಿದ್ಯಾರ್ಥಿ ನೆಲೆಯಲ್ಲಿಯೆ ದುಡಿಮೆಯ ಅವಕಾಶವನ್ನು ಪಡೆಯಬಹುದು. ಇದು ವಿದ್ಯಾರ್ಥಿಯ ಭವಿಷ್ಯದ ದೃಷ್ಟಿಯಿಂದ ಕೆಲಸದ ಮೇಲಿನ ಹಿಡಿತ ಹಾಗೂ ಹಣಕಾಸಿನ ಭದ್ರತೆಗೆ ಸಹಕಾರಿ ಎಂದರು.
ನಂತರ ತಂಡದ ಸದಸ್ಯರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿ ಇನ್ಫೋಸಿಸ್ ಬಿಪಿಎಂನ ಕರ್ಯಸ್ಥಾನ ತೆರೆಯುವ ಕುರಿತು ಸ್ಥಳ ಪರಿಶೀಲನೆ ಹಾಗೂ ಚರ್ಚೆ ನಡೆಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…