ಕ್ರೀಡೆ

ದತ್ತು ಗ್ರಾಮ ಕೆದಂಬಾಡಿಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಎನ್‌ ಎಸ್‌ ಎಸ್‌ ವತಿಯಂದ ಅರಣ್ಯ ವಿಸ್ತರಣಾ ಕಾರ್ಯಕ್ರಮ.

ಪುತ್ತೂರು : ಮಾನವನು ಪ್ರಕೃತಿಯ ಅವಿಭಾಜ್ಯ ಅಂಗ. ಮಾನವರಾದ ನಾವು ಎಲ್ಲವನ್ನೂ ಪ್ರಕೃತಿಯ ಮಡಿಲಿನಿಂದ ಪಡೆಯುತ್ತೇವೆ. ನಾವೇನೇ ಸಾಧನೆ ಮಾಡಿದರೂ ಅದು ಪ್ರಕೃತಿಯ ಕೊಡುಗೆ. ಪ್ರಕೃತಿಯು ಮನುಕುಲದ ಸೊತ್ತು. ಅದನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಕಾಲೇಜಿನ ಎನ್‌ ಎಸ್‌ ಎಸ್‌ ಘಟಕಗಳು ಒಂದು ಉಪಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ” ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾದ ವಂ|ಡಾಆಂಟೊನಿ ಪ್ರಕಾಶ್‌ ಮೊಂತೆರೋರವರು ಅಭಿಪ್ರಾಯಪಟ್ಟರು.

ಅವರು ಕಾಲೇಜಿನ ರಾಷ್ಟ್ರೀಯ ಸೇವಾಯೋಹನೆಯ ವತಿಯಿಂದ ದತ್ತುಗ್ರಾಮವಾದ ಕೆದಂಬಾಡಿಯ ನಿಡ್ಯಾಣದ ಸರ್ವೇನಂಬ್ರ 7/P1 ಸರಕಾರಿ ಜಾಗದಲ್ಲಿ ನಡೆದ ಅರಣ್ಯ ವಿಸ್ತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಎನ್‌ ಎಸ್‌ ಎಸ್‌ ಕಾರ್ಯಕ್ರಮಾಧಿಕಾರಿಯಾದ ವಾಸುದೇವ ಎನ್‌ ರವರು “ಉಷ್ಣವಲಯದಲ್ಲಿರುವ ಭಾರತದಂತಹ ದೇಶಗಳಲ್ಲಿ ಒಟ್ಟು ಭೂಭಾಗದ ಶೇಕಡಾ 33ರಷ್ಟು ಪ್ರದೇಶದಲ್ಲಿ ಅರಣ್ಯವನ್ನು ಹೊಂದಿರಬೇಕು. ಆದರೆ ಈಗಿನ ಅಂಕಿ ಅಂಶಗಳ ಪ್ರಕಾರ ಶೇಕಡಾ 22ರಿಂದ 24 ಮಾತ್ರವೇ ಅರಣ್ಯ ಪ್ರದೇಶವಿದೆ. ಅರಣ್ಯದ ಕೊರತೆ ಪ್ರಾಕೃತಿಕ ವೈಪರೀತ್ಯಗಳಿಗೆ ಕಾರಣವಾಗುತ್ತದೆ. ಈ ದಿಸೆಯಲ್ಲಿ ಕಾಲೇಜಿನ ಎನ್‌ ಎಸ್‌ ಎಸ್‌ ಘಟಕಗಳ ವಿತಯಿಂದ ದತ್ತು ಗ್ರಾಮದಲ್ಲಿ ಅರಣ್ಯ ವಿಸ್ತರಣೆಯ ಪುಟ್ಟ ಪ್ರಯತ್ನ” ಎಂದು ಹೇಳಿದರು.


ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎನ್‌ ಎಸ್‌ ಎಸ್‌ ಸ್ವಯಂಸೇವಕರು ಸಾಗುವಾನಿ, ಬೇಂಗ, ಹಲಸು, ಹೆಬ್ಬಲಸು, ಬೀಟಿ, ನೇರಳೆ, ಪುನರ್ಪುಳಿ ಮುಂತಾದ ನೂರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟರು. ಈ ಕಾರ್ಯಕ್ರಮಕ್ಕೆ ಕೆದಂಬಾಡಿ ಗ್ರಾಮ ಪಂಚಾಯತ್‌ ಸಂಪೂರ್ಣ ಸಹಕಾರ ನೀಡಿದ್ದು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಅಜಿತ್‌ ಜಿ ಕೆ, ಅಧ್ಯಕ್ಷರಾದ ಸುಜಾತ ಎನ್‌, ಉಪಾಧ್ಯಕ್ಷರಾದ ಜಯಲಕ್ಷ್ಮಿ, ಸದಸ್ಯರಾದ ವಿಠಲರವರು ಸಕ್ರಿಯವಾಗಿ ಪಾಲ್ಗೊಂಡರು. ಕಾಲೇಜಿನ ಎನ್‌ ಎಸ್‌ ಎಸ್‌ ಕಾರ್ಯಕ್ರಮಾಧಿಕಾರಿಯಾದ ಪುಷ್ಪ ಎನ್‌, ಕಾರ್ಯದರ್ಶಿ ವೈಷ್ಣವಿ ಕೆ, ಘಟಕ ನಾಯಕರಾದ ಸಿಂಚನ್‌, ಕಾಲೇಜಿನ ಹಿತೈಷಿ ಪೊನ್ನಪ್ಪರವರು ಹಾಗೂ ಎನ್‌ ಎಸ್‌ ಎಸ್‌ ಸ್ವಯಂಸೇವಕರು ಭಾಗವಹಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…

1 day ago

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…

1 day ago

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…

2 days ago

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…

2 days ago

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…

2 days ago

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…

3 days ago