ಪುತ್ತೂರು : ಮಾನವನು ಪ್ರಕೃತಿಯ ಅವಿಭಾಜ್ಯ ಅಂಗ. ಮಾನವರಾದ ನಾವು ಎಲ್ಲವನ್ನೂ ಪ್ರಕೃತಿಯ ಮಡಿಲಿನಿಂದ ಪಡೆಯುತ್ತೇವೆ. ನಾವೇನೇ ಸಾಧನೆ ಮಾಡಿದರೂ ಅದು ಪ್ರಕೃತಿಯ ಕೊಡುಗೆ. ಪ್ರಕೃತಿಯು ಮನುಕುಲದ ಸೊತ್ತು. ಅದನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕಗಳು ಒಂದು ಉಪಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ” ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾದ ವಂ|ಡಾಆಂಟೊನಿ ಪ್ರಕಾಶ್ ಮೊಂತೆರೋರವರು ಅಭಿಪ್ರಾಯಪಟ್ಟರು.
ಅವರು ಕಾಲೇಜಿನ ರಾಷ್ಟ್ರೀಯ ಸೇವಾಯೋಹನೆಯ ವತಿಯಿಂದ ದತ್ತುಗ್ರಾಮವಾದ ಕೆದಂಬಾಡಿಯ ನಿಡ್ಯಾಣದ ಸರ್ವೇನಂಬ್ರ 7/P1 ಸರಕಾರಿ ಜಾಗದಲ್ಲಿ ನಡೆದ ಅರಣ್ಯ ವಿಸ್ತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಯಾದ ವಾಸುದೇವ ಎನ್ ರವರು “ಉಷ್ಣವಲಯದಲ್ಲಿರುವ ಭಾರತದಂತಹ ದೇಶಗಳಲ್ಲಿ ಒಟ್ಟು ಭೂಭಾಗದ ಶೇಕಡಾ 33ರಷ್ಟು ಪ್ರದೇಶದಲ್ಲಿ ಅರಣ್ಯವನ್ನು ಹೊಂದಿರಬೇಕು. ಆದರೆ ಈಗಿನ ಅಂಕಿ ಅಂಶಗಳ ಪ್ರಕಾರ ಶೇಕಡಾ 22ರಿಂದ 24 ಮಾತ್ರವೇ ಅರಣ್ಯ ಪ್ರದೇಶವಿದೆ. ಅರಣ್ಯದ ಕೊರತೆ ಪ್ರಾಕೃತಿಕ ವೈಪರೀತ್ಯಗಳಿಗೆ ಕಾರಣವಾಗುತ್ತದೆ. ಈ ದಿಸೆಯಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕಗಳ ವಿತಯಿಂದ ದತ್ತು ಗ್ರಾಮದಲ್ಲಿ ಅರಣ್ಯ ವಿಸ್ತರಣೆಯ ಪುಟ್ಟ ಪ್ರಯತ್ನ” ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಾಗುವಾನಿ, ಬೇಂಗ, ಹಲಸು, ಹೆಬ್ಬಲಸು, ಬೀಟಿ, ನೇರಳೆ, ಪುನರ್ಪುಳಿ ಮುಂತಾದ ನೂರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟರು. ಈ ಕಾರ್ಯಕ್ರಮಕ್ಕೆ ಕೆದಂಬಾಡಿ ಗ್ರಾಮ ಪಂಚಾಯತ್ ಸಂಪೂರ್ಣ ಸಹಕಾರ ನೀಡಿದ್ದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ ಕೆ, ಅಧ್ಯಕ್ಷರಾದ ಸುಜಾತ ಎನ್, ಉಪಾಧ್ಯಕ್ಷರಾದ ಜಯಲಕ್ಷ್ಮಿ, ಸದಸ್ಯರಾದ ವಿಠಲರವರು ಸಕ್ರಿಯವಾಗಿ ಪಾಲ್ಗೊಂಡರು. ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಯಾದ ಪುಷ್ಪ ಎನ್, ಕಾರ್ಯದರ್ಶಿ ವೈಷ್ಣವಿ ಕೆ, ಘಟಕ ನಾಯಕರಾದ ಸಿಂಚನ್, ಕಾಲೇಜಿನ ಹಿತೈಷಿ ಪೊನ್ನಪ್ಪರವರು ಹಾಗೂ ಎನ್ ಎಸ್ ಎಸ್ ಸ್ವಯಂಸೇವಕರು ಭಾಗವಹಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…