ಜನ ಮನದ ನಾಡಿ ಮಿಡಿತ

Advertisement

“ಸ್ವಚ್ಛತಾ ಹೀ ಸೇವಾ”ದ ಅಂಗವಾಗಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮೂಡಬಿದಿರೆ: ದೇಶದಾದ್ಯಂತ ಸೆಪ್ಟಂಬರ್ 15 ರಿಂದ ಅಕ್ಟೋಬರ್ 02ರ ವರೆಗೆ ವಿಶೇಷ ಸ್ವಚ್ಛತಾ ಅಭಿಯಾನದ ಹಿನ್ನಲೆಯಲ್ಲಿ ನಡೆಯುತ್ತಿರುವ “ಸ್ವಚ್ಛತಾ ಹೀ ಸೇವಾ”ದ ಅಂಗವಾಗಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನ ಆಸುಪಾಸು ಹಾಗೂ ಪುತ್ತಿಗೆ ಗ್ರಾಮ ಪಂಚಾಯಿತಿಯ ರಸ್ತೆಯ ಬದಿಗಳನ್ನು ಕಾಲೇಜಿನ ಸುಮಾರು ನೂರು ವಿದ್ಯಾರ್ಥಿಗಳು, 25ಕ್ಕೂ ಅಧಿಕ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಸೇರಿ ಸ್ವಚ್ಛಗೊಳಿಸಿದರು.
ವಿದ್ಯಾರ್ಥಿಗಳು ಅಭಿಯಾನದ ಅಂಗವಾಗಿ ‘ಮನಸ್ಸು ಮತ್ತು ಪರಿಸರ ಎರಡನ್ನು ಸ್ವಚ್ಛವಾಗಿಡಿ’, ‘ಸ್ವಚ್ಛತೆ ದೈವತ್ವ’, ‘ಪ್ಲಾಸ್ಟಿಕ್ ಉಳಿವು ಜೀವಿಗಳ ಅಳಿವು’, ‘ಸ್ವಚ್ಛತೆ ಕಾಪಾಡಿ ರೋಗಗಳಿಂದ ದೂರವಿರಿ’ ಮುಂತಾದ ಜಾಗೃತಿ ಫಲಕಗಳೊಂದಿಗೆ ಕರ‍್ಯಕ್ರಮದಲ್ಲಿ ಪಾಲ್ಗೊಂಡರು.


ನಂತರ 100ಕ್ಕೂ ಅಧಿಕ ಚೀಲಗಳಲ್ಲಿ ಸಂಗ್ರಹವಾದ ಕಸವನ್ನು ನಗರಸಭೆಯ ವಾಹನದಲ್ಲಿ ಕಳಿಸಿ ವಿಲೇವಾರಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ ಡಿ, ಕಾಲೇಜಿನ ಎನ್‌ಸಿಸಿ ಅಧಿಕಾರಿ ಅರುಣ್ ಕುಮಾರ್, ಸಂಯೋಜಕರುಗಳಾದ ತ್ರಿವೇಣಿ, ಶ್ರೀಧರ, ವಿರನ್, ಸ್ವಾತಿ ಹಾಗೂ ಉಪನ್ಯಾಸಕ ವರ್ಗದವರು ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು ಪಾಲ್ಗೊಂಡರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!