ಮೂಡಬಿದಿರೆ: ದೇಶದಾದ್ಯಂತ ಸೆಪ್ಟಂಬರ್ 15 ರಿಂದ ಅಕ್ಟೋಬರ್ 02ರ ವರೆಗೆ ವಿಶೇಷ ಸ್ವಚ್ಛತಾ ಅಭಿಯಾನದ ಹಿನ್ನಲೆಯಲ್ಲಿ ನಡೆಯುತ್ತಿರುವ “ಸ್ವಚ್ಛತಾ ಹೀ ಸೇವಾ”ದ ಅಂಗವಾಗಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ಆಸುಪಾಸು ಹಾಗೂ ಪುತ್ತಿಗೆ ಗ್ರಾಮ ಪಂಚಾಯಿತಿಯ ರಸ್ತೆಯ ಬದಿಗಳನ್ನು ಕಾಲೇಜಿನ ಸುಮಾರು ನೂರು ವಿದ್ಯಾರ್ಥಿಗಳು, 25ಕ್ಕೂ ಅಧಿಕ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಸೇರಿ ಸ್ವಚ್ಛಗೊಳಿಸಿದರು.
ವಿದ್ಯಾರ್ಥಿಗಳು ಅಭಿಯಾನದ ಅಂಗವಾಗಿ ‘ಮನಸ್ಸು ಮತ್ತು ಪರಿಸರ ಎರಡನ್ನು ಸ್ವಚ್ಛವಾಗಿಡಿ’, ‘ಸ್ವಚ್ಛತೆ ದೈವತ್ವ’, ‘ಪ್ಲಾಸ್ಟಿಕ್ ಉಳಿವು ಜೀವಿಗಳ ಅಳಿವು’, ‘ಸ್ವಚ್ಛತೆ ಕಾಪಾಡಿ ರೋಗಗಳಿಂದ ದೂರವಿರಿ’ ಮುಂತಾದ ಜಾಗೃತಿ ಫಲಕಗಳೊಂದಿಗೆ ಕರ್ಯಕ್ರಮದಲ್ಲಿ ಪಾಲ್ಗೊಂಡರು.
ನಂತರ 100ಕ್ಕೂ ಅಧಿಕ ಚೀಲಗಳಲ್ಲಿ ಸಂಗ್ರಹವಾದ ಕಸವನ್ನು ನಗರಸಭೆಯ ವಾಹನದಲ್ಲಿ ಕಳಿಸಿ ವಿಲೇವಾರಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ ಡಿ, ಕಾಲೇಜಿನ ಎನ್ಸಿಸಿ ಅಧಿಕಾರಿ ಅರುಣ್ ಕುಮಾರ್, ಸಂಯೋಜಕರುಗಳಾದ ತ್ರಿವೇಣಿ, ಶ್ರೀಧರ, ವಿರನ್, ಸ್ವಾತಿ ಹಾಗೂ ಉಪನ್ಯಾಸಕ ವರ್ಗದವರು ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು ಪಾಲ್ಗೊಂಡರು.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…