ಮೂಡಬಿದಿರೆ: ದೇಶದಾದ್ಯಂತ ಸೆಪ್ಟಂಬರ್ 15 ರಿಂದ ಅಕ್ಟೋಬರ್ 02ರ ವರೆಗೆ ವಿಶೇಷ ಸ್ವಚ್ಛತಾ ಅಭಿಯಾನದ ಹಿನ್ನಲೆಯಲ್ಲಿ ನಡೆಯುತ್ತಿರುವ “ಸ್ವಚ್ಛತಾ ಹೀ ಸೇವಾ”ದ ಅಂಗವಾಗಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ಆಸುಪಾಸು ಹಾಗೂ ಪುತ್ತಿಗೆ ಗ್ರಾಮ ಪಂಚಾಯಿತಿಯ ರಸ್ತೆಯ ಬದಿಗಳನ್ನು ಕಾಲೇಜಿನ ಸುಮಾರು ನೂರು ವಿದ್ಯಾರ್ಥಿಗಳು, 25ಕ್ಕೂ ಅಧಿಕ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಸೇರಿ ಸ್ವಚ್ಛಗೊಳಿಸಿದರು.
ವಿದ್ಯಾರ್ಥಿಗಳು ಅಭಿಯಾನದ ಅಂಗವಾಗಿ ‘ಮನಸ್ಸು ಮತ್ತು ಪರಿಸರ ಎರಡನ್ನು ಸ್ವಚ್ಛವಾಗಿಡಿ’, ‘ಸ್ವಚ್ಛತೆ ದೈವತ್ವ’, ‘ಪ್ಲಾಸ್ಟಿಕ್ ಉಳಿವು ಜೀವಿಗಳ ಅಳಿವು’, ‘ಸ್ವಚ್ಛತೆ ಕಾಪಾಡಿ ರೋಗಗಳಿಂದ ದೂರವಿರಿ’ ಮುಂತಾದ ಜಾಗೃತಿ ಫಲಕಗಳೊಂದಿಗೆ ಕರ್ಯಕ್ರಮದಲ್ಲಿ ಪಾಲ್ಗೊಂಡರು.
ನಂತರ 100ಕ್ಕೂ ಅಧಿಕ ಚೀಲಗಳಲ್ಲಿ ಸಂಗ್ರಹವಾದ ಕಸವನ್ನು ನಗರಸಭೆಯ ವಾಹನದಲ್ಲಿ ಕಳಿಸಿ ವಿಲೇವಾರಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ ಡಿ, ಕಾಲೇಜಿನ ಎನ್ಸಿಸಿ ಅಧಿಕಾರಿ ಅರುಣ್ ಕುಮಾರ್, ಸಂಯೋಜಕರುಗಳಾದ ತ್ರಿವೇಣಿ, ಶ್ರೀಧರ, ವಿರನ್, ಸ್ವಾತಿ ಹಾಗೂ ಉಪನ್ಯಾಸಕ ವರ್ಗದವರು ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು ಪಾಲ್ಗೊಂಡರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…