ಜನ ಮನದ ನಾಡಿ ಮಿಡಿತ

Advertisement

ಕುಂಬಳೆ; ಅಣ್ಣ ತಂಗಿಯರ ಪುತ್ರಿಯರು ನಾಪತ್ತೆ

ಅಣ್ಣ ತಂಗಿಯರ ಇಬ್ಬರು ಹೆಣ್ಣುಮಕ್ಕಳು ನಾಪತ್ತೆಯಾದ ಘಟನೆ ಕುಂಬಳೆಯಲ್ಲಿ ನಡೆದಿದ್ದು, ಕುಂಬಳೆ ಹಾಗೂ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 15ರ ಹರೆಯದ ಹಾಗೂ 22ರ ಹರೆಯದ ಹೆಣ್ಮಕ್ಕಳು ನಿಗೂಢವಾಗಿ ನಾಪತ್ತೆಯಾದವರು.

ವರ್ಕಾಡಿ ನಿವಾಸಿ 15ರ ಹರೆಯದ ಬಾಲಕಿಯ ಹೆತ್ತವರು ಉಳ್ಳಾಲದಲ್ಲಿ ನಡೆದಿದ್ದ ವಿವಾಹಕ್ಕೆ ತೆರಳಿದ್ದರು. ಇಬ್ಬರು ಹೆಣ್ಮಕ್ಕಳ ಸಹಿತ ನಾಲ್ವರು ಮಕ್ಕಳು ಮನೆಯಲ್ಲಿ ಉಳಿದುಕೊಂಡಿದ್ದರು. ಸಂಜೆ ಮನೆಗೆ ವಾಪಸಾದಾಗ ಮಗಳು ನಾಪತ್ತೆಯಾಗಿದ್ದಳು. ಉಳಿದ ಮಕ್ಕಳಲ್ಲಿ ಪ್ರಶ್ನಿಸಿದಾಗ ಬಾಲಕಿ ಮುಟ್ಟಂಗೆ ತೆರಳಿರುವುದಾಗಿ ತಿಳಿಸಿದ್ದಾರೆ.

ಬಾಲಕಿಯ ತಂದೆ ಮುಟ್ಟಂನಲ್ಲಿರುವ ಸಹೋದರಿಯ ಮನೆಗೆ ಕರೆ ಮಾಡಿ ವಿಚಾರಿಸಿದಾಗ ತನ್ನ 22ರ ಹರೆಯದ ಯುವತಿಯೂ ನಾಪತ್ತೆಯಾಗಿದ್ದಾಳೆಂದು ತಿಳಿಸಿ ದ್ದಾರೆ. ಈ ಇಬ್ಬರು ಜತೆಯಾಗಿ ಹೋಗಿರಬಹುದೆಂದು ಶಂಕಿಸಿ ಇತರೆಡೆ ಹುಡುಕಾಡಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಮಂಜೇಶ್ವರ ಮತು ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ನಡೆಸಿದ ತನಿಖೆಯಲ್ಲಿ ಇವರಿಬ್ಬರ ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌ ಆಗಿರುವುದು ತಿಳಿದು ಬಂದಿದೆ.

ಇವರ ಪತ್ತೆಗೆ ವಿವಿಧ ಸ್ಥಳಗಳಲ್ಲಿರುವ ಸಿಸಿಟಿವಿ ಕೆಮರಾಗಳ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!