ಅಣ್ಣ ತಂಗಿಯರ ಇಬ್ಬರು ಹೆಣ್ಣುಮಕ್ಕಳು ನಾಪತ್ತೆಯಾದ ಘಟನೆ ಕುಂಬಳೆಯಲ್ಲಿ ನಡೆದಿದ್ದು, ಕುಂಬಳೆ ಹಾಗೂ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 15ರ ಹರೆಯದ ಹಾಗೂ 22ರ ಹರೆಯದ ಹೆಣ್ಮಕ್ಕಳು ನಿಗೂಢವಾಗಿ ನಾಪತ್ತೆಯಾದವರು.
ವರ್ಕಾಡಿ ನಿವಾಸಿ 15ರ ಹರೆಯದ ಬಾಲಕಿಯ ಹೆತ್ತವರು ಉಳ್ಳಾಲದಲ್ಲಿ ನಡೆದಿದ್ದ ವಿವಾಹಕ್ಕೆ ತೆರಳಿದ್ದರು. ಇಬ್ಬರು ಹೆಣ್ಮಕ್ಕಳ ಸಹಿತ ನಾಲ್ವರು ಮಕ್ಕಳು ಮನೆಯಲ್ಲಿ ಉಳಿದುಕೊಂಡಿದ್ದರು. ಸಂಜೆ ಮನೆಗೆ ವಾಪಸಾದಾಗ ಮಗಳು ನಾಪತ್ತೆಯಾಗಿದ್ದಳು. ಉಳಿದ ಮಕ್ಕಳಲ್ಲಿ ಪ್ರಶ್ನಿಸಿದಾಗ ಬಾಲಕಿ ಮುಟ್ಟಂಗೆ ತೆರಳಿರುವುದಾಗಿ ತಿಳಿಸಿದ್ದಾರೆ.
ಬಾಲಕಿಯ ತಂದೆ ಮುಟ್ಟಂನಲ್ಲಿರುವ ಸಹೋದರಿಯ ಮನೆಗೆ ಕರೆ ಮಾಡಿ ವಿಚಾರಿಸಿದಾಗ ತನ್ನ 22ರ ಹರೆಯದ ಯುವತಿಯೂ ನಾಪತ್ತೆಯಾಗಿದ್ದಾಳೆಂದು ತಿಳಿಸಿ ದ್ದಾರೆ. ಈ ಇಬ್ಬರು ಜತೆಯಾಗಿ ಹೋಗಿರಬಹುದೆಂದು ಶಂಕಿಸಿ ಇತರೆಡೆ ಹುಡುಕಾಡಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಮಂಜೇಶ್ವರ ಮತು ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ನಡೆಸಿದ ತನಿಖೆಯಲ್ಲಿ ಇವರಿಬ್ಬರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿರುವುದು ತಿಳಿದು ಬಂದಿದೆ.
ಇವರ ಪತ್ತೆಗೆ ವಿವಿಧ ಸ್ಥಳಗಳಲ್ಲಿರುವ ಸಿಸಿಟಿವಿ ಕೆಮರಾಗಳ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…