ಕಾರವಾರ : ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಬ್ಯಾಕಲ್ ಮೇಲ್ ಮಾಡಿ ಹಣ ವಸೂಲಿಗೆ ಯತ್ನಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನನ್ನ ಕಾರವಾರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಬಂಧಿತ ಆರೋಪಿಯಾಗಿದ್ದಾನೆ. ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ. 2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ.
ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ. ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ. ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ. ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ.
ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರವಾರದ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿ ಪ್ರಶಾಂತ ಭಟ್ ಮಾಣಿಲನನ್ನು ಪೊಲೀಸರು ಬಂಧಿಸಿದ್ದಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…