ಕಾರವಾರ : ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಬ್ಯಾಕಲ್ ಮೇಲ್ ಮಾಡಿ ಹಣ ವಸೂಲಿಗೆ ಯತ್ನಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನನ್ನ ಕಾರವಾರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಬಂಧಿತ ಆರೋಪಿಯಾಗಿದ್ದಾನೆ. ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು ಕ್ಲಬ್ ಹೌಸ್ ಆ್ಯಪ್ನಲ್ಲಿ ಹಾಡುತ್ತಿದ್ದಳು. 2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ. 2023ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ.
ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ. ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ. ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ. ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ. ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾನೆ.
ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಾರವಾರದ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿ ಪ್ರಶಾಂತ ಭಟ್ ಮಾಣಿಲನನ್ನು ಪೊಲೀಸರು ಬಂಧಿಸಿದ್ದಾರೆ.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…