ಮುಲ್ಕಿ: ಮುಲ್ಕಿ ವಲಯದ ಪಡುಪಣಂಬೂರು ವಿನಯ ತೆಂಗು ಬೆಳೆಗಾರರ ರೈತ ಉತ್ಪಾದಕ ಕಂಪನಿ, ಕರ್ನಾಟಕ ಸರಕಾರ ತೋಟಗಾರಿಕಾ ಇಲಾಖೆಯ ಸಹಯೋಗದಡಿ ಮತ್ತು ಬೆಂಗಳೂರು ಐಸಿಸಿಒಎ ಸಂಪನ್ಮೂಲ ಸಂಸ್ಥೆ ಸಹಭಾಗಿತ್ವದಲ್ಲಿ ವಾರ್ಷಿಕ ಮಹಾಸಭೆ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿನಯ ಬೆಳೆಗಾರರ ಸಂಘದ ಅಧ್ಯಕ್ಷರಾದ ವಿಜಯ ಶೆಟ್ಟಿ ಕೋಲ್ನಾಡು ವಹಿಸಿದ್ದರು.
ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸರಕಾರದ ಸವಲತ್ತುಗಳನ್ನು ಪ್ರತಿ ಗ್ರಾಮದ ಕೃಷಿಕರು ಪಡೆಯುವಂತಾಗಲು ಸಹಕಾರ ಸಂಘಗಳು ಅಗತ್ಯ ಎಂದರು
ಶಾಸಕ ಉಮಾನಾಥ ಕೋಟ್ಯಾನ್ ದೀಪ ಪ್ರಜ್ವಲನೆ ಮಾಡಿ ಮಾತನಾಡಿ ಯುವ ಜನಾಂಗಕ್ಕೆ ಕೃಷಿಗೆ ಪ್ರೋತ್ಸಾಹ ನೀಡುತ್ತಿರುವ ವಿನಯ ಬೆಳಗಾರರ ಸಂಘ ಗ್ರಾಮಕ್ಕೆ ಮಾದರಿ ಎಂದರು.
ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ ಲೋಗೋ ಬಿಡುಗಡೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ತೋಟಗಾರಿಕಾ ನಿರ್ದೇಶಕ ಪ್ರವೀಣ್ ಕೆ, ಮುಲ್ಕಿ ಹೋಬಳಿಯ ಕೃಷಿ ಅಧಿಕಾರಿ ವಸಂತ್ ಶ್ರೀನಿವಾಸ್ ಕುಲಕರ್ಣಿ, ಸಹಾಯಕ ತೋಟಗಾರಿಕಾ ಅಧಿಕಾರಿ ಯುಗೇಂದ್ರ, ಬೆಂಗಳೂರು ಐಸಿಸಿಒಎ ಹಿರಿಯ ಮುಖ್ಯಸ್ಥ ಭಾನುಪ್ರಕಾಶ್, ಜಿಲ್ಲಾ ಸಂಯೋಜಕ ಸತೀಶ್ ನಾಯ್ಕ, ವಿಜಯ ಶೆಟ್ಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾ ಸದಾಶಿವ ಶೆಟ್ಟಿ, ಪುರುಷೋತ್ತಮ ಕೆ. ಕೋಟ್ಯಾನ್, ಗಂಗಾಧರ ಶೆಟ್ಟಿ ಬರ್ಕೆ ತೋಟ ಮತ್ತಿತರರು ಉಪಸ್ಥಿತರಿದ್ದರು. ಪತ್ರಕರ್ತ ನವೀನ್ ಶೆಟ್ಟಿಎಡ್ಮೆಮಾರ್ ನಿರೂಪಿಸಿದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…