ವಿಟ್ಲ: ಆಟೋ ರಿಕ್ಷಾದಲ್ಲಿ ಬಂದ ತಂಡವೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕು ವಿಟ್ಲ ಕಸಬ ನಿವಾಸಿ ಮಹಮ್ಮದ್ ಸುಹೈಲ್ ಪ್ರಕರಣದ ದೂರುದಾರರಾಗಿದ್ದು,
ಸೆ.27 ರಂದು ರಾತ್ರಿ ನಾನು ಕಂಬಳಬೆಟ್ಟುವಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಹಾರೀಸ್ ಎಂಬಾತನ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಸಂಬಂದಿಸಿ ಮಾತಿನ ಚಕಮುಖಿ ನಡೆದಿತ್ತು.
ಇದೇ ಪ್ರಕರಣದ ಮುಂದುವರಿದ ಭಾಗವೆಂಬಂತೆ ಸೆ.೨೮ರಂದಿ ಬೆಳಿಗ್ಗೆ ನಾನು ನನ್ನ ಅಟೋರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಬಂಟ್ವಾಳ ತಾಲೂಕು ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ತಲುಪಿದಾಗ ಆರೋಪಿ ಹಾರೀಸ್ ಎಂಬಾತನು ಆತನ ಅಟೋರಿಕ್ಷಾದಲ್ಲಿ ಅಶ್ರಫ್ ಉರಿಮಜಲು, ರಿಯಾಝ್ ಉರಿಮಜಲು ಹಾಗೂ ಅಚ್ಚುಕು ಕೊಲ್ಪೆ ರವರೊಂದಿಗೆ ಸೇರಿ ನನ್ನ ಅಟೊ ರಿಕ್ಷಾಕ್ಕೆ ಅವರ ಆಟೋ ರಿಕ್ಷಾವನ್ನು ಅಡ್ಡ ಇಟ್ಟು ತಡೆದು ನಿಲ್ಲಿಸಿ ಹಾರೀಸ್ ನನಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಿ ಸುಹೈಲ್ ರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಡಿಲು ಬಡಿದು ದೇವಾಲಯದ ಅರ್ಚಕರೊಬ್ಬರು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರು ಗ್ರಾಮದ…
ಮಂಗಳೂರಿನ ಯೆಯ್ಯಾಡಿ ಗುಂಡಳಿಕೆ ನಿವಾಸಿ 35ರ ಹರೆಯದ ಪ್ರಜ್ವಲ್ ಪೂಜಾರಿ ಅವರು ಹೃ*ದಯಾಘಾತದಿಂದ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ. ಹಿಂದೂ ಜಾಗರಣ…
ಬಿಸಿಲಿನ ತಾಪ ಹಾಗೂ ಕಣ್ಣು ಮುಚ್ಚಾಳೆಯ ಮಳೆಯ ನಡುವೆ ಬಂಟ್ವಾಳ ತಾಲೂಕಿನಲ್ಲಿ ಜ್ವರದ ಬಾದೆ ಹೆಚ್ಚಾಗುತ್ತಿದೆ. ಬಂಟ್ವಾಳ ತಾಲೂಕಿನ ನಂದಾವರ…
ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಲಾಗಿದೆ. ಭಜರಂಗದಳ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಮಂಗಳೂರು…
ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಹಕ್ಕುಗಳನ್ನು ಗೌರವಿಸುವ ದಿಸೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಬ್ಯಾರಿಸ್ ಸೆಂಟ್ರಲ್ ಕಮಿಟಿಯು…
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ…