ವಿಟ್ಲ: ಆಟೋ ರಿಕ್ಷಾದಲ್ಲಿ ಬಂದ ತಂಡವೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕು ವಿಟ್ಲ ಕಸಬ ನಿವಾಸಿ ಮಹಮ್ಮದ್ ಸುಹೈಲ್ ಪ್ರಕರಣದ ದೂರುದಾರರಾಗಿದ್ದು,
ಸೆ.27 ರಂದು ರಾತ್ರಿ ನಾನು ಕಂಬಳಬೆಟ್ಟುವಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಹಾರೀಸ್ ಎಂಬಾತನ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಸಂಬಂದಿಸಿ ಮಾತಿನ ಚಕಮುಖಿ ನಡೆದಿತ್ತು.
ಇದೇ ಪ್ರಕರಣದ ಮುಂದುವರಿದ ಭಾಗವೆಂಬಂತೆ ಸೆ.೨೮ರಂದಿ ಬೆಳಿಗ್ಗೆ ನಾನು ನನ್ನ ಅಟೋರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಬಂಟ್ವಾಳ ತಾಲೂಕು ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ತಲುಪಿದಾಗ ಆರೋಪಿ ಹಾರೀಸ್ ಎಂಬಾತನು ಆತನ ಅಟೋರಿಕ್ಷಾದಲ್ಲಿ ಅಶ್ರಫ್ ಉರಿಮಜಲು, ರಿಯಾಝ್ ಉರಿಮಜಲು ಹಾಗೂ ಅಚ್ಚುಕು ಕೊಲ್ಪೆ ರವರೊಂದಿಗೆ ಸೇರಿ ನನ್ನ ಅಟೊ ರಿಕ್ಷಾಕ್ಕೆ ಅವರ ಆಟೋ ರಿಕ್ಷಾವನ್ನು ಅಡ್ಡ ಇಟ್ಟು ತಡೆದು ನಿಲ್ಲಿಸಿ ಹಾರೀಸ್ ನನಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಿ ಸುಹೈಲ್ ರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…