ಜ್ಞಾನ

ಕರ್ನಾಟಕ ಬಂದ್‌ಗೆ ಪಿರಿಯಾಪಟ್ಟಣದಲ್ಲಿ ಮಿಶ್ರ ಪ್ರತಿಕ್ರಿಯೆ

ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ, ಔಷಧಿ ಅಂಗಡಿ, ಹಾಲಿನ ಬೂತ್, ಬ್ಯಾಂಕ್, ಸರ್ಕಾರಿ ಕಚೇರಿಗಳು, ಅಗತ್ಯ ವಸ್ತುಗಳ ಅಂಗಡಿ ಎಂದಿನ0ತೆ ತೆರೆದು ಕಾರ್ಯನಿರ್ವಹಿಸಿದವು, ಗ್ರಾಮಾಂತರ ಪ್ರದೇಶಗಳಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯರ್ಥವಾಯಿತು.

ಪಟ್ಟಣದ ಸಂತೆಮಾಳ ಬಳಿಯ ಹೂ ಹಾಗೂ ತರಕಾರಿ ಮಾರುಕಟ್ಟೆ ಎಂದಿನ0ತೆ ಕಾರ್ಯ ನಿರ್ವಹಿಸಿತು, ಮುಂಜಾಗ್ರತ ಕ್ರಮವಾಗಿ ಸಾರಿಗೆ ಸಂಚಾರದಲ್ಲಿ ಬೆಳಿಗ್ಗೆಯಿಂದ ಮೈಸೂರು ಬೆಂಗಳೂರು ಮಡಿಕೇರಿ ಮಂಗಳೂರು ಸೇರಿದಂತೆ ಗ್ರಾಮಾಂತರ ಪ್ರದೇಶಕ್ಕೆ ಪಿರಿಯಾಪಟ್ಟಣದಿಂದ ಸಾರಿಗೆ ವ್ಯವಸ್ಥೆ ನಿಲ್ಲಿಸಿದ್ದರಿಂದ ಸಾರ್ವಜನಿಕರ ಸಂಚಾರ ವಿರಳವಾಗಿತ್ತು, ಘಟಕ ವ್ಯವಸ್ಥಾಪಕ ದರ್ಶನ್ ರಾಮಚಂದ್, ಎಇಇ ವಸಂತ್, ಸಹಾಯಕ ಸಂಚಾರ ಅಧೀಕ್ಷಕ ಕುಮಾರ್, ಸಂಚಾರ ನಿಯಂತ್ರಕ ಶ್ರೀನಿವಾಸ್, ಸುರೇಶ್, ರಾಘು, ಬಸ್ ನಿಲ್ದಾಣದಲ್ಲಿದ್ದು ಮುಂಜಾಗ್ರತೆ ವಹಿಸಿದ್ದರು, ಮಧ್ಯಾಹ್ನ ಬಳಿಕ ಸಾರಿಗೆ ಸಂಚಾರ ಆರಂಭವಾಯಿತು.


ಖಾಸಗಿ ವಾಹನಗಳು ಎಂದಿನ0ತೆ ಸಂಚರಿಸಿದವು. ಕರ್ನಾಟಕ ರಾಜ್ಯ ರೈತ ಸಂಘ ನೇತೃತ್ವದಲ್ಲಿ ತಾಲೂಕಿನ ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಸರ್ಕಲ್ ಇನ್ಸೆ÷್ಪಕ್ಟರ್ ಕಚೇರಿ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿ ಬೆಟ್ಟದಪುರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟಿಸಿ ತಹಶೀಲ್ದಾರ್ ಕುಂ ಇ ಅಹಮದ್ ಅವರಿಗೆ ಮನವಿ ನೀಡಿದರು. ಪ್ರತಿಭಟನೆಗೆ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಬೆಕ್ಕರೆ ಸತೀಶ್ ಆರಾಧ್ಯ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಸದಸ್ಯರು ಬೆಂಬಲ ಸೂಚಿಸಿದರು.

ಈ ಸಂದರ್ಭ ರೈತ ಸಂಘ ತಾಲೂಕು ಅಧ್ಯಕ್ಷ ಕೆ.ಎಸ್ ಸ್ವಾಮಿಗೌಡ ಪದಾಧಿಕಾರಿಗಳಾದ ಗುರುರಾಜ್, ನವೀನ್ ರಾಜೆ ಅರಸ್, ದಶರತ್, ಪಿ.ಮಹದೇವ್, ಮಹೇಶ್, ಗಣೇಶ್, ಮಂಜುನಾಥ್, ಬಾಲರಾಜೆ ಅರಸ್, ಸುರೇಶ್, ಹರೀಶ್, ಜವರಪ್ಪ, ರೈತ ಸಂಘ ಹಸಿರು ಸೇನೆ ತಾಲೂಕು ಅಧ್ಯಕ್ಷ ದಿನೇಶ್, ರಾಮೇಗೌಡ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಸಿ.ಎಸ್ ಜಗದೀಶ್, ತಮ್ಮಣ್ಣಯ್ಯ, ದಾಸರಾಜ್, ರಾಜು, ಮೂಲ ನಿವಾಸಿ ಅಂಬೇಡ್ಕರ್ ಸಂಘದ ತಾಲೂಕು ಅಧ್ಯಕ್ಷ ಬೆಟ್ಟದತುಂಗಾ ರಾಜು, ಜಿಲ್ಲಾ ಮಹಿಳಾಧ್ಯಕ್ಷೆ ರತ್ನಮ್ಮ, ವೆಂಕಟೇಶ್, ಚನ್ನಬಸವ, ಬಿಜೆಪಿ ಮುಖಂಡರಾದ ಕೌಲನಹಳ್ಳಿ ಸೋಮಶೇಖರ್, ಲೋಕಪಾಲಯ್ಯ ಮತ್ತಿತರಿದ್ದರು, ಈ ವೇಳೆ ಬಿ.ಎಂ ಮುಖ್ಯರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಯಿತು, ಪಿರಿಯಾಪಟ್ಟಣ ಪೋಲೀಸರು ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ನೀಡಿದ್ದರು, ಬಂದ್‌ಗೆ ಪಟ್ಟಣದ ಕೆಲವರ್ತಕರು ಬೆಳಿಗ್ಗೆಯಿಂದ ತಮ್ಮ ಅಂಗಡಿ ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಿದರೆ ಹಲವರು ಮಧ್ಯಾಹ್ನದ ಬಳಕೆ ತೆರೆದು ಎಂದಿನ0ತೆ ವ್ಯಾಪಾರ ನಡೆಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

8 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

8 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

9 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

1 day ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

1 day ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

1 day ago