ಬಂಟ್ವಾಳ: ವಾಯುಭಾರ ಕುಸಿತ ಕಂಡ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಎಡೆಬಿಡದೆ ಬಿಡದೆ ಸುರಿಯುವ ಗಾಳಿ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಮಳೆಹಾನಿಯಾಗಿ ಲಕ್ಷಾಂತರ ರೂ ಹಾನಿಯಾಗಿದೆ.
ಈಗಾಗಲೇ ಸುಮಾರು ಆರು ಮನೆಗಳಿಗೆ ತೀವ್ರ ಸ್ವರೂಪದ ಹಾನಿಯಾಗಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಗಾಳಿ ಮಳೆಗೆ ಮನೆಯ ಹಂಚುಗಳು ನೆಲಕ್ಕುರಳಿದ ಘಟನೆ ಹಾಗೂ ಮನೆಯ ಗೋಡೆಗಳು ಕುಸಿದು ಬಿದ್ದ ಘಟನೆಗಳು ನಡೆದಿದ್ದು, ಮನೆಯವರಿಗೆ ವಾಸ ಮಾಡಲು ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಬಂಟ್ವಾಳ ಕಸಬಾ ಗ್ರಾಮದ ಮಣಿಹಳ್ಳ ಎಂಬಲ್ಲಿ ಈ ದಿನ ಬಂದ ಬಾರಿ ಬಿರುಗಾಳಿ ಹಾಗೂ ಮಳೆಗೆ ಭವಾನಿ ಮೂಲ್ಯ, ಶ್ರೀಮತಿ ಆಚಾರಿ, ಪೂರ್ಣಿಮಾ ,ಗುಲಾಬಿ, ಗುಲಾಬಿ, ಲಕ್ಷ್ಮಣ ಮೂಲ್ಯ ರವರ ಮನೆಗಳ ಹಂಚು ಮೇಲ್ಛಾವಣಿಗೆ ಬಾಗಶ: ಹಾನಿಯಾಗಿದೆ.
ಘಟನೆ ನಡೆದ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾತ್ಕಾಲಿಕವಾಗಿ ವಾಸ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಂಡಿದ್ದಾರೆ. ಜೊತೆಗೆ ಹಾನಿಯಾದ ಎಲ್ಲಾ ಮನೆಗಳಿಗೂ ಸರಕಾರದ ಪಾಕೃತಿಕ ವಿಕೋಪದಡಿಯಲ್ಲಿ ಪರಿಹಾರವನ್ನು ನೀಡಲಾಗುವ ಭರವಸೆ ನೀಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…