ಬಂಟ್ವಾಳ: ವಾಯುಭಾರ ಕುಸಿತ ಕಂಡ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಎಡೆಬಿಡದೆ ಬಿಡದೆ ಸುರಿಯುವ ಗಾಳಿ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಮಳೆಹಾನಿಯಾಗಿ ಲಕ್ಷಾಂತರ ರೂ ಹಾನಿಯಾಗಿದೆ.
ಈಗಾಗಲೇ ಸುಮಾರು ಆರು ಮನೆಗಳಿಗೆ ತೀವ್ರ ಸ್ವರೂಪದ ಹಾನಿಯಾಗಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಗಾಳಿ ಮಳೆಗೆ ಮನೆಯ ಹಂಚುಗಳು ನೆಲಕ್ಕುರಳಿದ ಘಟನೆ ಹಾಗೂ ಮನೆಯ ಗೋಡೆಗಳು ಕುಸಿದು ಬಿದ್ದ ಘಟನೆಗಳು ನಡೆದಿದ್ದು, ಮನೆಯವರಿಗೆ ವಾಸ ಮಾಡಲು ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಬಂಟ್ವಾಳ ಕಸಬಾ ಗ್ರಾಮದ ಮಣಿಹಳ್ಳ ಎಂಬಲ್ಲಿ ಈ ದಿನ ಬಂದ ಬಾರಿ ಬಿರುಗಾಳಿ ಹಾಗೂ ಮಳೆಗೆ ಭವಾನಿ ಮೂಲ್ಯ, ಶ್ರೀಮತಿ ಆಚಾರಿ, ಪೂರ್ಣಿಮಾ ,ಗುಲಾಬಿ, ಗುಲಾಬಿ, ಲಕ್ಷ್ಮಣ ಮೂಲ್ಯ ರವರ ಮನೆಗಳ ಹಂಚು ಮೇಲ್ಛಾವಣಿಗೆ ಬಾಗಶ: ಹಾನಿಯಾಗಿದೆ.
ಘಟನೆ ನಡೆದ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾತ್ಕಾಲಿಕವಾಗಿ ವಾಸ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಂಡಿದ್ದಾರೆ. ಜೊತೆಗೆ ಹಾನಿಯಾದ ಎಲ್ಲಾ ಮನೆಗಳಿಗೂ ಸರಕಾರದ ಪಾಕೃತಿಕ ವಿಕೋಪದಡಿಯಲ್ಲಿ ಪರಿಹಾರವನ್ನು ನೀಡಲಾಗುವ ಭರವಸೆ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…