ಜನ ಮನದ ನಾಡಿ ಮಿಡಿತ

Advertisement

ಸೇತುವೆಗೆ ಡಿಕ್ಕಿ ಹೊಡೆದ ಬೈಕ್..! 40 ಅಡಿ ಆಳದ ಹೊಳೆಗೆ ಬಿದ್ದ ಪಾಕ ಪ್ರವೀಣ ಹರ್ಷವರ್ಧನ ಭಟ್

ಬೈಕ್ ಸೇತುವೆಗೆ ಡಿಕ್ಕಿ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯ ಮುಸ್ಲಿಂ ಯುವಕರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ.

ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಪಾಕ ಪ್ರವೀಣ ಹರ್ಷವರ್ಧನ ಭಟ್ ಅವರು ಕಾರ್ಯನಿಮಿತ್ತ ಇಂದು ಬೆಳಗಿನ ಜಾವ ತನ್ನ ಬೈಕಿನಲ್ಲಿ ವಿಟ್ಲ ಕಡೆ ಹೊರಟಿದ್ದರು.

ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಹರ್ಷವರ್ಧನ 40ಅಡಿ ಆಳದ ಹೊಳೆಗೆ ಬಿದ್ದಿದ್ದಾರೆ. ಕೊಡಂಗಾಯಿ ಹೊಳೆ ಸಮೀಪ ಬೆಳಗ್ಗಿನ ಜಾವ 4ಗಂಟೆ ಸುಮಾರಿಗೆ ಈ ಬಗ್ಗೆ ಸ್ಥಳೀಯರು ನೋಡಿದ್ದಾರೆ.

ಹುಡುಕಿದಾಗ ಐವತ್ತು ಮೀಟರ್ ದೂರದಲ್ಲಿ ಹೊಳೆ ಮಧ್ಯೆ ನೀರಿನಲ್ಲಿ ಒಬ್ಬ ವ್ಯಕ್ತಿ ಬೊಬ್ಬೆ ಹೊಡೆಯುವ ಶಬ್ದ ಕೇಳಿ ಬಂದಿದೆ. ತಕ್ಷಣವೇ ಹೊಳೆ ನೀರಿಗೆ ಹಾರಿದ ಯುವಕರು ವ್ಯಕ್ತಿಯನ್ನು ಮೇಲಕ್ಕೆತ್ತಿ ರಸ್ತೆಗೆ ತಂದು ವಿಚಾರಿಸಿದಾಗ ತಾನು ಮಂಕುಡೆಯ ಹರ್ಷವರ್ಧನ ಎಂಬ ಪರಿಚಯ ಹೇಳಿದ್ದಾರೆ.

ಬಳಿಕ ಗಾಯಾಳುವನ್ನು ಉಪಚರಿಸಿದ ಯುವಕರು ಆಟೋ ಮೂಲಕ ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದು, ಯುವಕರ ಕಾರ್ಯಕ್ಕೆ ಪಾಕಪ್ರವೀಣ ಹರ್ಷವರ್ಧನ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!