ಬೈಕ್ ಸೇತುವೆಗೆ ಡಿಕ್ಕಿ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯ ಮುಸ್ಲಿಂ ಯುವಕರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಪಾಕ ಪ್ರವೀಣ ಹರ್ಷವರ್ಧನ ಭಟ್ ಅವರು ಕಾರ್ಯನಿಮಿತ್ತ ಇಂದು ಬೆಳಗಿನ ಜಾವ ತನ್ನ ಬೈಕಿನಲ್ಲಿ ವಿಟ್ಲ ಕಡೆ ಹೊರಟಿದ್ದರು.
ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಹರ್ಷವರ್ಧನ 40ಅಡಿ ಆಳದ ಹೊಳೆಗೆ ಬಿದ್ದಿದ್ದಾರೆ. ಕೊಡಂಗಾಯಿ ಹೊಳೆ ಸಮೀಪ ಬೆಳಗ್ಗಿನ ಜಾವ 4ಗಂಟೆ ಸುಮಾರಿಗೆ ಈ ಬಗ್ಗೆ ಸ್ಥಳೀಯರು ನೋಡಿದ್ದಾರೆ.
ಹುಡುಕಿದಾಗ ಐವತ್ತು ಮೀಟರ್ ದೂರದಲ್ಲಿ ಹೊಳೆ ಮಧ್ಯೆ ನೀರಿನಲ್ಲಿ ಒಬ್ಬ ವ್ಯಕ್ತಿ ಬೊಬ್ಬೆ ಹೊಡೆಯುವ ಶಬ್ದ ಕೇಳಿ ಬಂದಿದೆ. ತಕ್ಷಣವೇ ಹೊಳೆ ನೀರಿಗೆ ಹಾರಿದ ಯುವಕರು ವ್ಯಕ್ತಿಯನ್ನು ಮೇಲಕ್ಕೆತ್ತಿ ರಸ್ತೆಗೆ ತಂದು ವಿಚಾರಿಸಿದಾಗ ತಾನು ಮಂಕುಡೆಯ ಹರ್ಷವರ್ಧನ ಎಂಬ ಪರಿಚಯ ಹೇಳಿದ್ದಾರೆ.
ಬಳಿಕ ಗಾಯಾಳುವನ್ನು ಉಪಚರಿಸಿದ ಯುವಕರು ಆಟೋ ಮೂಲಕ ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದು, ಯುವಕರ ಕಾರ್ಯಕ್ಕೆ ಪಾಕಪ್ರವೀಣ ಹರ್ಷವರ್ಧನ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…