ಬೈಕ್ ಸೇತುವೆಗೆ ಡಿಕ್ಕಿ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯ ಮುಸ್ಲಿಂ ಯುವಕರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಪಾಕ ಪ್ರವೀಣ ಹರ್ಷವರ್ಧನ ಭಟ್ ಅವರು ಕಾರ್ಯನಿಮಿತ್ತ ಇಂದು ಬೆಳಗಿನ ಜಾವ ತನ್ನ ಬೈಕಿನಲ್ಲಿ ವಿಟ್ಲ ಕಡೆ ಹೊರಟಿದ್ದರು.
ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಹರ್ಷವರ್ಧನ 40ಅಡಿ ಆಳದ ಹೊಳೆಗೆ ಬಿದ್ದಿದ್ದಾರೆ. ಕೊಡಂಗಾಯಿ ಹೊಳೆ ಸಮೀಪ ಬೆಳಗ್ಗಿನ ಜಾವ 4ಗಂಟೆ ಸುಮಾರಿಗೆ ಈ ಬಗ್ಗೆ ಸ್ಥಳೀಯರು ನೋಡಿದ್ದಾರೆ.
ಹುಡುಕಿದಾಗ ಐವತ್ತು ಮೀಟರ್ ದೂರದಲ್ಲಿ ಹೊಳೆ ಮಧ್ಯೆ ನೀರಿನಲ್ಲಿ ಒಬ್ಬ ವ್ಯಕ್ತಿ ಬೊಬ್ಬೆ ಹೊಡೆಯುವ ಶಬ್ದ ಕೇಳಿ ಬಂದಿದೆ. ತಕ್ಷಣವೇ ಹೊಳೆ ನೀರಿಗೆ ಹಾರಿದ ಯುವಕರು ವ್ಯಕ್ತಿಯನ್ನು ಮೇಲಕ್ಕೆತ್ತಿ ರಸ್ತೆಗೆ ತಂದು ವಿಚಾರಿಸಿದಾಗ ತಾನು ಮಂಕುಡೆಯ ಹರ್ಷವರ್ಧನ ಎಂಬ ಪರಿಚಯ ಹೇಳಿದ್ದಾರೆ.
ಬಳಿಕ ಗಾಯಾಳುವನ್ನು ಉಪಚರಿಸಿದ ಯುವಕರು ಆಟೋ ಮೂಲಕ ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದು, ಯುವಕರ ಕಾರ್ಯಕ್ಕೆ ಪಾಕಪ್ರವೀಣ ಹರ್ಷವರ್ಧನ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…