ಬೈಕ್ ಸೇತುವೆಗೆ ಡಿಕ್ಕಿ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯ ಮುಸ್ಲಿಂ ಯುವಕರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಪಾಕ ಪ್ರವೀಣ ಹರ್ಷವರ್ಧನ ಭಟ್ ಅವರು ಕಾರ್ಯನಿಮಿತ್ತ ಇಂದು ಬೆಳಗಿನ ಜಾವ ತನ್ನ ಬೈಕಿನಲ್ಲಿ ವಿಟ್ಲ ಕಡೆ ಹೊರಟಿದ್ದರು.
ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಹರ್ಷವರ್ಧನ 40ಅಡಿ ಆಳದ ಹೊಳೆಗೆ ಬಿದ್ದಿದ್ದಾರೆ. ಕೊಡಂಗಾಯಿ ಹೊಳೆ ಸಮೀಪ ಬೆಳಗ್ಗಿನ ಜಾವ 4ಗಂಟೆ ಸುಮಾರಿಗೆ ಈ ಬಗ್ಗೆ ಸ್ಥಳೀಯರು ನೋಡಿದ್ದಾರೆ.
ಹುಡುಕಿದಾಗ ಐವತ್ತು ಮೀಟರ್ ದೂರದಲ್ಲಿ ಹೊಳೆ ಮಧ್ಯೆ ನೀರಿನಲ್ಲಿ ಒಬ್ಬ ವ್ಯಕ್ತಿ ಬೊಬ್ಬೆ ಹೊಡೆಯುವ ಶಬ್ದ ಕೇಳಿ ಬಂದಿದೆ. ತಕ್ಷಣವೇ ಹೊಳೆ ನೀರಿಗೆ ಹಾರಿದ ಯುವಕರು ವ್ಯಕ್ತಿಯನ್ನು ಮೇಲಕ್ಕೆತ್ತಿ ರಸ್ತೆಗೆ ತಂದು ವಿಚಾರಿಸಿದಾಗ ತಾನು ಮಂಕುಡೆಯ ಹರ್ಷವರ್ಧನ ಎಂಬ ಪರಿಚಯ ಹೇಳಿದ್ದಾರೆ.
ಬಳಿಕ ಗಾಯಾಳುವನ್ನು ಉಪಚರಿಸಿದ ಯುವಕರು ಆಟೋ ಮೂಲಕ ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದು, ಯುವಕರ ಕಾರ್ಯಕ್ಕೆ ಪಾಕಪ್ರವೀಣ ಹರ್ಷವರ್ಧನ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…